ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ಬಿ.ಸಿ ನಾಗೇಶ್

Public TV
1 Min Read

ಗದಗ: ಮೆಕಾಲೆ ಶಿಕ್ಷಣ ಪದ್ಧತಿಯು (Macaulay’s Education System) ನಮ್ಮನ್ನು ಗುಲಾಮಗಿರಿಗೆ ದೂಡಿತ್ತು. ಅದರಿಂದ ಹೊರಬರಲು ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಯೊಂದೇ ಮಾರ್ಗ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಹೇಳಿದ್ದಾರೆ.

ನಗರದ ವಿದ್ಯಾದಾನ ಸಮಿತಿ ಶಾಲಾ ಶತಮಾನೋತ್ಸವ ಸಮಾರಂಭದ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು, ಗುಲಾಮಗಿರಿ ಶಿಕ್ಷಣ ಪದ್ಧತಿಯಿಂದ ಹೊರ ಬರಲು ಎನ್‌ಇಪಿ ಅಗತ್ಯವಿದೆ. ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು ಎಂದರು.

ವಿದ್ಯಾರ್ಥಿ ತಾನು ಬಯಸಿದ್ದನ್ನು ಕಲಿಯುವ ಪದ್ಧತಿಯೇ ಎನ್‌ಇಪಿ ಪದ್ಧತಿ. ಮೆಕಾಲೆ ಶಿಕ್ಷಣದಿಂದ ಎಲ್ಲರನ್ನು ಒಂದು ಮಾಡುತ್ತೇವೆ ಎಂದು ಹೊರಟ ಬ್ರಿಟಿಷರು ಮೆಕಾಲೆ ಶಿಕ್ಷಣ ಪದ್ಧತಿಯಿಂದ ಗುಲಾಮಗಿರಿಗೆ ದೂಡಿದರು. ಆದರೆ ವ್ಯಕ್ತಿಯನ್ನು ಗುಲಾಮಗಿರಿಯಿಂದ ಹೊರತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸಿದೆ. ಪ್ರತಿ ವ್ಯಕ್ತಿಯಲ್ಲಿ ವ್ಯಕ್ತಿತ್ವ ರೂಪುಗೊಳ್ಳಲು ಎನ್‌ಇಪಿ ಬೇಕು. ಅದಕ್ಕಾಗಿ ಪ್ರಧಾನಿ ಮೋದಿ ಅವರ ಆಶಯದಂತೆ ಈ ವರ್ಷ ಎನ್‌ಇಪಿ ಜಾರಿ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಅದ್ಧೂರಿ ತೆರೆ

1,900ರ ನಂತರ ಮೆಕಾಲೆ ಶಿಕ್ಷಣ ಪದ್ಧತಿ ಭಾರತವನ್ನು ಆಕ್ರಮಿಸಿ ನಮ್ಮತನದ ಶಿಕ್ಷಣ ಪದ್ಧತಿ ದೂರ ಮಾಡಿತು. ಮೆಕಾಲೆ ಶಿಕ್ಷಣ ಪದ್ಧತಿ ಸೂಕ್ತವಲ್ಲ. ಈಗ ನ್ಯಾಷನಲ್ ಎಜುಕೇಶನ್ ಪಾಲಿಸಿ ಜಾರಿಗೆ ಬರುತ್ತಿದೆ ಎಂದರು. ಇದನ್ನೂ ಓದಿ: 2019 ಏಕದಿನ ವಿಶ್ವಕಪ್ ನೆನೆಪಿಸಿದ ಬೆನ್‍ಸ್ಟೋಕ್ಸ್ – ನಿಜವಾದ ಮ್ಯಾಚ್ ವಿನ್ನರ್ ಎಂದ ಫ್ಯಾನ್ಸ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *