ಕಲ್ಲಡ್ಕ ಪ್ರಭಾಕರ ಭಟ್‍ಗೆ ಪರೋಕ್ಷ ಟಾಂಗ್ ಕೊಟ್ಟ ಮಾಧುಸ್ವಾಮಿ

Public TV
1 Min Read

ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ ಚುನಾವಣೆಗೆ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ಕಾನೂನು ಸಂಸದೀಯ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಮುಂದಿನ ಚುನಾವಣೆಗೆ ನಿಲ್ಲಲ್ಲವೆಂದು ಹೇಳಿದ್ದಾರೆ: ಕಲ್ಲಡ್ಕ ಪ್ರಭಾಕರ್ ಭಟ್

ಸಚಿವ ಮಾಧುಸ್ವಾಮಿ ಇಂದು ಹಾಸನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳು ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಪ್ರಭಾಕರ್ ಭಟ್ ಹೇಳಿಕೆ ಅದು ಅವರ ವೈಯಕ್ತಿಕ. ಆದರೆ ಸಿಎಂ ಬಿಎಸ್‍ವೈ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ ನಾನು ಚುನಾವಣೆಗೆ ಹೋಗುವುದಿಲ್ಲ ಎಂದು ಹೇಳಿಲ್ಲ. ಈ ಹಿಂದೆ ಹಲವಾರು ಸಭೆಯಲ್ಲಿ 150 ಸೀಟ್ ಗೆಲ್ಲಿಸಿ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದ್ದಾರೆ. ನಾವೆಲ್ಲರೂ ಸಿಎಂ ನಾಯಕತ್ವವನ್ನು ಒಪ್ಪಿಕೊಂಡಿದ್ದೇವೆ ಎಂದರು.

ಸಚಿವ ಸಂಪುಟ ವಿಸ್ತರಣೆಯನ್ನು ಸಿಎಂ ಯಡಿಯೂರಪ್ಪ ಪ್ರವಾಸದಿಂದ ಬಂದ ನಂತರ ಮಾಡುತ್ತಾರೆ ಎಂದು ತಿಳಿಸಿದರು. ಡಿಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಅಯ್ಯೋ ನಾನು ಅಷ್ಟೊಂದು ಆಳವಾಗಿ ಯೋಚನೆ ಮಾಡಿಲ್ಲ. ಅದು ದೊಡ್ಡವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *