ಸಚಿವರಿಗೆ ತುರಿಕೆ ಪುಡಿ ಎರಚಿದ ಅನಾಮಿಕ – ಸಭೆಯಲ್ಲೇ ಕುರ್ತಾ ತೆಗೆದು ಕೈ ತೊಳೆದುಕೊಂಡ ಸಚಿವ

Public TV
1 Min Read

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಚಿವರೊಬ್ಬರು (Minister) ಸಾರ್ವಜನಿಕ ಸಭೆಯೊಂದರಲ್ಲೇ ಕುರ್ತಾ ತೆಗೆದು ಬಾಟಲಿಯ ನೀರಿನಿಂದ ಕೈಗಳನ್ನು ತೊಳೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಧ್ಯಪ್ರದೇಶದ ಮುಂಗೋಲಿ ಗ್ರಾಮದ ಮೂಲಕ ಬಿಜೆಪಿ ವಿಕಾಸ್ ರಥಯಾತ್ರೆ ವೇಳೆ ಈ ಘಟನೆ ನಡೆದಿದೆ. ಸಾರ್ವಜನಿಕ ಸಭೆಯೊಂದರಲ್ಲಿ ರಾಜ್ಯ ಸಚಿವ ಬ್ರಜೇಂದ್ರ ಸಿಂಗ್ ಯಾದವ್ (Brajendra Singh Yadav) ಮೇಲೆ ಯಾರೋ ತುರುಕೆ ಪುಡಿ ಎರೆಚಿದ್ದಾನೆ. ಈ ವೇಳೆ ತುರಿಕೆ ಎಷ್ಟು ತೀವ್ರವಾಗಿತ್ತೆಂದರೆ ಸಚಿವರು ಕುರ್ತಾ ತೆಗೆದು ಬಾಟಲಿ ನೀರಿನಿಂದ ತೊಳೆಯಬೇಕಾಯಿತು.

ಎರಡು ದಿನಗಳ ಹಿಂದೆ ವಿಕಾಸ ರಥವು ಖಾಂಡ್ವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಚರಿಸುತ್ತಿದ್ದಾಗ ಹಾಳಾದ ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಯಾತ್ರೆಯ ನೇತೃತ್ವ ವಹಿಸಿದ್ದ ಸ್ಥಳೀಯ ಬಿಜೆಪಿ ಶಾಸಕ ದೇವೇಂದ್ರ ವರ್ಮಾ ಮತ್ತು ಗ್ರಾಮದ ಮಾಜಿ ಸರಪಂಚ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ಪ್ರದೇಶದಲ್ಲಿ ಸರ್ಕಾರವು 3 ಕಿ.ಮೀ ರಸ್ತೆಯನ್ನು ಸಹ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರು ಅಂತಾ ಹೇಳ್ಕೊಂಡು ಚಿನ್ನದ ಬಿಸ್ಕೆಟ್‌, ಹಣ ದರೋಡೆ ಮಾಡಿದ್ದ ಆರೋಪಿಗಳು ಅಂದರ್‌

ನಾವು ಕಾಂಗ್ರೆಸ್ ಅನ್ನು ಕೆಟ್ಟದಾಗಿ ಪರಿಗಣಿಸಿದ್ದೇವೆ. ಆದರೆ ನೀವು (ಬಿಜೆಪಿ) ಕಾಂಗ್ರೆಸ್‍ಗಿಂತ ಕೆಟ್ಟವರು. ನಮಗೆ ಸರಿಯಾದ ರಸ್ತೆಗಳನ್ನು ನೀಡಿ. ಇಲ್ಲದಿದ್ದರೆ ನಾವು ನಿಮಗೆ ಮತ ಹಾಕುವುದಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೋ ವೈರಲ್ ಆಗಿತ್ತು. ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ ಮತ ಹಾಕಬೇಡಿ, ಅದು ನಿಮ್ಮ ಹಕ್ಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *