ಮಡಿಕೇರಿ ದಸರಾ – ದಶ ದೇವಾಲಯಗಳಲ್ಲಿ ಯದುವೀರ್ ಒಡೆಯರ್ ವಿಶೇಷ ಪೂಜೆ

Public TV
3 Min Read

ಮಡಿಕೇರಿ: ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ (Madikeri Dasara) ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ (Mysuru Dasara) ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜನರು ಮಡಿಕೇರಿಯತ್ತ ಹೆಜ್ಜೆ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಯದುವೀರ್ ಒಡೆಯರ್  (Yaduveer Wadiyar) ದಸರಾ ಮಂಟಪಗಳು ಹೊರಡುವ ದಶ ದೇವಾಲಯಗಳಿಗೆ ತೆರಳಿ ದಸರಾ ಯಶಸ್ವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ನಾಡ ಹಬ್ಬ ಮೈಸೂರು ದಸರಾಗೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಹಬ್ಬದ ಸಂಭ್ರಮ ಕಳೆಗಟ್ಟಿದೆ. ಅಲ್ಲದೇ ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಇತ್ತ ಮಂಜಿನ ನಗರಿ ಮಡಿಕೇರಿಯ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ಧೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಇದೇ ಮೊದಲ ಬಾರಿಗೆ ಮಡಿಕೇರಿ ನಗರದ ದಶ ದೇವಾಲಯಗಳಿಗೆ ತೆರಳಿ ಮಡಿಕೇರಿ ದಸರಾ ಉತ್ಸವಕ್ಕೆ ವಿಶೇಷ ಪೂಜೆ ಪ್ರಾರ್ಥನೆ ನೇರವೇರಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ ಕೇಸ್;‌ ಬೋಯಿಂಗ್‌, ಹನಿವೆಲ್‌ ವಿರುದ್ಧ ಮೃತರ ಕುಟುಂಬಗಳಿಂದ ಮೊಕದ್ದಮೆ

ಇಂದು ಬೆಳಗ್ಗೆಯಿಂದಲ್ಲೇ ಮಡಿಕೇರಿ ನಗರದ ಶ್ರೀ ಕೋಟೆ ಗಣಪತಿ ದೇವಾಲಯ, ದೇಚೂರು ಶ್ರೀರಾಮ ಮಂದಿರ, ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳದ ಚೌಟಿ ಮರಿಯಮ್ಮ, ದಂಡಿನ ಮರಿಯಮ್ಮ, ಕಂಚಿ ಕಾಮಾಕ್ಷಿ ದೇವಾಲಯ, ಕೋಟೆ ಮರಿಯಮ್ಮ ದೇವಾಲಯ ಸೇರಿದಂತೆ ದಶ ದೇವಾಲಯಗಳಿಗೆ ದಸರಾ ಸಮಿತಿಯ ಸದಸ್ಯರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಇದೇ ಸಂದರ್ಭ ಮಾತಾನಾಡಿದ ಯದುವೀರ್, ಮೈಸೂರು ದಸರಾ ಸಮಯದಲ್ಲಿ ಅರಮನೆಯಲ್ಲಿ ಕೆಲ ಧಾರ್ಮಿಕ ವಿಧಿವಿಧಾನಗಳನ್ನು ಮಾಡುವ ಸಂದರ್ಭದಲ್ಲಿ ಅರಮನೆಯಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮಡಿಕೇರಿ ದಸರಾ ಯಶಸ್ವಿಯಾಗಿ ನಡೆಯಬೇಕು ಎಂದು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

ಸಾಂಸ್ಕೃತಿಕ ನಗರಿ ಮೈಸೂರು ದಸರಾಕ್ಕೆ ತನ್ನದೆ ಆದ ಹಿನ್ನೆಲೆ ಇರುವ ಹಾಗೆ ಇತ್ತ ಮಂಜಿನ ನಗರಿ ಮಡಿಕೇರಿ ದಸರಾಕ್ಕೂ ಐತಿಹಾಸಿಕ ಹಿನ್ನೆಲೆ ಇದೆ. ನೂರಾರು ವರ್ಷಗಳ ಹಿಂದೆ ಶಿವಮೊಗ್ಗದ ಇಕ್ಕೇರಿಯಿಂದ ಕೊಡಗಿನ ಹಾಲೇರಿಗೆ ಬಂದು ನೆಲೆಸಿದ ಹಾಲೇರಿ ವಂಶಸ್ಥರು ವಿಜಯದಶಮಿ ಆಚರಣೆ ಮಾಡುತ್ತಿದ್ದರು. ಕೊಡಗನ್ನು ಆಳಿದ ದೊಡ್ಡವೀರರಾಜೇಂದ್ರ ಮಹಾರಾಜರು ಸಹ ಆಯುಧಪೂಜೆ, ಶ್ರೀದೇವಿಯ ಆರಾಧನೆ ಸೇರಿದಂತೆ ನವರಾತ್ರಿ ಉತ್ಸವ ಆಚರಿಸುತ್ತಿದ್ದರು ಎಂಬದಕ್ಕೆ ಅನೇಕ ಉಲ್ಲೇಖಗಳಿವೆ. ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

300 ವರ್ಷಗಳ ಇತಿಹಾಸ ಇರುವ ಮಡಿಕೇರಿ ದಸರಾಕ್ಕೆ ತನ್ನದೆ ಆದ ಪೌರಾಣಿಕ ಹಿನ್ನೆಲೆಯೂ ಇದೆ. ಹೀಗಾಗಿ ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಇತ್ತ ಮಂಜಿನ ನಗರಿ ಮಡಿಕೇರಿಯ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ. ಈ ನಡುವೆ ಇದೇ ಮೊದಲ ಬಾರಿಗೆ ಮಡಿಕೇರಿ ದಸರಾ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಯದುವೀರ್ ಒಡೆಯರ್ ವಿಶೇಷ ಪೂಜೆ ನೆರವೇರಿಸಿರುವುದರಿಂದ ದಸರಾ ಸಮಿತಿಯ ಸದಸ್ಯರುಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

Share This Article