ನಾಳೆಯಿಂದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ

Public TV
1 Min Read

ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ಮಹಾಮಸ್ತಕಾಭಿಷೇಕದ ಸಂಭ್ರಮ. ಮಹಾನ್ ವಿರಾಗಿ ಬಾಹುಬಲಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಜ್ಜನಕ್ಕೆ ಮಂಜುನಾಥನ ಕ್ಷೇತ್ರ ಸಜ್ಜಾಗಿದೆ.

ಕ್ಷೇತ್ರದ ಆವರಣದಲ್ಲಿರುವ ಬಾಹುಬಲಿ ಬೆಟ್ಟದಲ್ಲಿ ಬಾಹುಬಲಿಯ ಮೂರ್ತಿಗೆ ವಿವಿಧ ದ್ರವ್ಯಗಳಿಂದ ಅಭಿಷೇಕ ನಡೆಯಲಿದೆ. 9 ದಿನಗಳ ಉತ್ಸವಕ್ಕೆ ಫೆ.9 ರಂದು ಸಿಎಂ ಎಚ್.ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಉತ್ಸವದ ಪ್ರತಿ ದಿನವೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು ಇಂದು(ಶುಕ್ರವಾರ) ಸಂತ ಸಮ್ಮೇಳನ ಆಯೋಜಿಸಲಾಗಿದೆ.

ಸಮ್ಮೇಳನಕ್ಕೆ ವಿಶೇಷ ಆಹ್ವಾನಿತರಾಗಿ ಜೆಡಿಎಸ್ ವರಿಷ್ಠ ದೇವೇಗೌಡ ಆಗಮಿಸಲಿದ್ದಾರೆ. ಕೊನೆಯ ಮೂರು ದಿನಗಳಲ್ಲಿ ಅಂದರೆ, 16, 17 ಹಾಗೂ 18ರಂದು ಹೆಗ್ಗಡೆ ಕುಟುಂಬಸ್ಥರು ಮತ್ತು ಜೈನ ಧರ್ಮೀಯ ಸಾಧು ಸಂತರಿಂದ ಅಭಿಷೇಕ ನಡೆಯಲಿದ್ದು ವಿರಾಟ್ ಮೂರ್ತಿ ವಿವಿಧ ದ್ರವ್ಯಗಳ ಮೂಲಕ ಸ್ನಾನ ಮಾಡಿಸಲಾಗುತ್ತದೆ.

2008ರ ಬಳಿಕ 12 ವರ್ಷಗಳ ಆವರ್ತನವಾಗಿ ಬಾಹುಬಲಿ ಮೂರ್ತಿಗೆ ಈ ಬಾರಿ ನಾಲ್ಕನೇ ಮಸ್ತಕಾಭಿಷೇಕ. 1972ರಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲೇ ಬಾಹುಬಲಿ ಮೂರ್ತಿಯ ಪ್ರತಿಷ್ಠಾಪನೆಯಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *