KSRTC ಬಸ್ ನಲ್ಲೇ ಹೆಣ್ಣು ಮಗು ಜನನ

Public TV
1 Min Read

ವಿಜಯಪುರ: ಗರ್ಭಿಣಿಯೊಬ್ಬರು ಸರ್ಕಾರಿ ಬಸ್‍ನಲ್ಲೆ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಮಹಾರಾಷ್ಟ್ರ ಮೂಲದ ಲಕ್ಷ್ಮೀ ರಾಠೋಡ ಮಗುವಿಗೆ ಜನ್ಮ ನೀಡಿದ ಮಹಿಳೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ವಿಜಯಪುರ ಮಾರ್ಗವಾಗಿ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದಾಗ ಬಸವನ ಬಾಗೇವಾಡಿ ತಾಲೂಕಿನ ಕೊಲ್ಹಾರ ಸಮೀಪ ಬರುತ್ತಿದ್ದಂತೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಕೂಡಲೇ ಬಸ್ ಚಾಲಕ ವಿಠ್ಠಲ ಹೆರಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ವಿಷಯ ಮುಟ್ಟಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಅಂತೆಯೇ ಡಾ. ಎಸ್.ಎಂ.ಪಾಟೀಲ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶೈಲಶ್ರೀ ಹಾಗೂ ಮಕಾನದಾರ ಸ್ಥಳಕ್ಕೆ ದೌಡಾಯಿಸಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

ಸದ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ ಲಕ್ಷ್ಮೀ ರಾಠೋ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂಬುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

 

 

Share This Article
Leave a Comment

Leave a Reply

Your email address will not be published. Required fields are marked *