ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ – ಲಕ್ಷ್ಮೇಶ್ವರದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

1 Min Read

ಗದಗ: ಮೆಕ್ಕೆಜೋಳ (Maize) ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Laxmeshwar) ಪಟ್ಟಣದಲ್ಲಿ ರೈತರ ಪ್ರತಿಭಟನೆ (Farmers Protest) ತೀವ್ರಗೊಂಡಿದೆ.

ಕಳೆದ 18 ದಿನಗಳಿಂದ ಸಮಗ್ರ ರೈತ ಸಂಘಟನೆಗಳ ಒಕ್ಕೂಟದಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಡು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪ್ರಯಾಣಿಕರು ಪರದಾಡಿದರು.

ಶೀಘ್ರದಲ್ಲೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಆಗಮಿಸಿ ಅನ್ನದಾತರನ್ನು ಮನವೊಲಿಸಲು ಮುಂದಾದರು. ಇದನ್ನೂ ಓದಿ:  ರಾಜ್ಯದ ಐದು ಜಿಲ್ಲೆಗಳಲ್ಲಿ ಅಂತರ್ಜಲದ ವಿಪರೀತ ಬಳಕೆ

ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಗವಿಮಠದ ಕುಮಾರ ಮಹಾರಾಜ್ ಸ್ವಾಮಿಜಿ ಅಸ್ವಸ್ಥರಾಗಿದ್ದಾರೆ. ಹೋರಾಟದ ವೇದಿಕೆಯಲ್ಲಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನನ್ನ ಪ್ರಾಣ ಹೋದರೂ ಪರವಾಗಿಲ್ಲ ಹೋರಾಟ ವೇದಿಕೆಯಿಂದ ಕದಲುವುದಿಲ್ಲ. ರೈತರಿಗೆ ನ್ಯಾಯ ಸಿಗುವವರೆಗೆ ವೇದಿಕೆಯಿಂದ ತೆರಳುವುದಿಲ್ಲ. ಚಿಕಿತ್ಸೆ ಸಹ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Share This Article