ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Public TV
2 Min Read

– ಇಂಡೋನೇಷ್ಯಾದಲ್ಲಿ ಪಾಕ್‌ ಮುಖವಾಡ ಬಯಲುಮಾಡಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ (Article 370) ರದ್ದತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ (Salman Khurshid) ಸ್ವಾಗತಿಸಿದ್ದಾರೆ.

ಪಾಕಿಸ್ತಾನ (Pakistan) ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ತಿಳಿಸಲು ಭಾರತವು ಜೆಡಿ (U) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷ ನಿಯೋಗವನ್ನು ಇಂಡೋನೇಷ್ಯಾಗೆ (Indonesia) ಕಳುಹಿಸಿದೆ. ಇದರ ಭಾಗವಾಗಿರುವ ಖುರ್ಷಿದ್‌ ಮಾತನಾಡುವಾಗ ಆರ್ಟಿಕಲ್‌ 370 ರದ್ದತಿಯನ್ನ ಶ್ಲಾಘಿಸಿದ್ದಾರೆ.

2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಸಮೃದ್ಧಿಯನ್ನು ಕಂಡಿದೆ ಅಂತ ಹೇಳಿದ್ದಾರೆ. ಅಲ್ಲದೇ 370ನೇ ವಿಧಿ ರದ್ದತಿಯಿಂದ ಜಮ್ಮು ಮತ್ತು ಕಾಶ್ಮೀರ ಭಾರತದ ಉಳಿದ ಭಾಗಗಳಿಂದ ಪ್ರತ್ಯೇಕವಾದ ಪ್ರದೇಶ ಎಂಬ ಗ್ರಹಿಕೆಯನ್ನೂ ಕೊನೆಗೊಳಿಸಿದೆ ಅಂತ ಮೋದಿ ಸರ್ಕಾರದ ಸಾಧನೆಯನ್ನ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

ಕಾಶ್ಮೀರವು ದೀರ್ಘಕಾಲದ ವರೆಗೆ ಒಂದು ಪ್ರಮುಖ ಸಮಸ್ಯೆ ಎದುರಿಸುತ್ತಿತ್ತು. ಸಂವಿಧಾನದ 370ನೇ ವಿಧಿಯಿಂದಾಗಿ ಅದು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆ ಸೃಷ್ಟಿಸಿತ್ತು. ಆದ್ರೆ 2019ರಲ್ಲಿ ಈ ವಿಧಿಯನ್ನ ರದ್ದುಪಡಿಸಲಾಯಿತು. ಈ ಮೂಲಕ ಪ್ರತ್ಯೇಕ ಎನ್ನುವ ಗ್ರಹಿಕೆಯನ್ನು ದೂರಮಾಡಲಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

370ನೇ ವಿಧಿ ರದ್ದತಿ ಬಳಿಕ ಅಲ್ಲಿ ಚುನಾವಣೆಯೂ ನಡೆಯಿತು. ಈಗ ಜನರಿಂದ ಆಯ್ಕೆಯಾದ ಸರ್ಕಾರ ಇದೆ. ಇದನ್ನು ಸಹಿಸದ ಕಿಡಿಗೇಡಿಗಳು ಸಮೃದ್ಧಿಯನ್ನು ಹಾಳುಮಾಡಲು ಬಯಸುತ್ತಿದ್ದಾರೆ ಅಂತ ಪಾಕ್‌ ವಿರುದ್ಧ ಕಿಡಿ ಕಾರಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ತೊಡೆದು ಹಾಕಲು ನಾವು ಸಿದ್ಧ: ಪಾಕ್‌ ವಿರುದ್ಧ ಅಮೆರಿಕದಲ್ಲಿ ಗುಡುಗಿದ ಶಶಿ ತರೂರ್‌

Share This Article