ಕಾಲುವೆ ಒಡೆದು ನೀರು ನುಗ್ಗಿದ್ದರಿಂದ ಕೆರೆಯಂತಾದ ನೂರಾರು ಎಕ್ರೆ ಜಮೀನು!

Public TV
1 Min Read

ಗದಗ: ಕಾಲುವೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿದ್ದರಿಂದ ನೂರಾರು ಎಕರೆ ಜಮೀನು ಕೆರೆಯಂತೆ ಭಾಸವಾಗುತ್ತಿರುವ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

ಕದಡಿ ಗ್ರಾಮದ ಬಳಿಯಿರುವ ಮಲಪ್ರಭಾ ಬಲದಂಡೆ ಕಾಲುವೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಹತ್ತಿರದ ಜಮೀನುಗಳಿಗೆ ನುಗ್ಗಿದೆ. ಪರಿಣಾಮ ನೂರಾರು ಎಕರೆ ಜಮೀನುಗಳು ಕೆರೆಯಂತೆ ನಿರ್ಮಾಣವಾಗಿದೆ. ಅಲ್ಲದೇ ಜಮೀನುಗಳಲ್ಲಿ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣ ಬೆಳೆ ನಷ್ಟವಾಗಿದೆ.

ಮಾಹಿತಿಗಳ ಪ್ರಕಾರ ಕಾಲುವೆ ಗುಣಮಟ್ಟಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ದರಿಂದ, ಕಾಲುವೆ ಒಡೆದಿದೆ ಎಂದು ಹೇಳಲಾಗುತ್ತಿದೆ. ಕಾಲುವೆ ಒಡೆಯಲು ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಾಲುವೇ ಒಡೆದಿರುವ ಬಗ್ಗೆ ನೀರಾವರಿ ನಿಗಮದ ಅಧಿಕಾರಿಗಳಿಗೆ ರೈತರು ಮಾಹಿತಿ ನೀಡಿದ್ದರೂ, ನೀರನ್ನು ಸ್ಥಗಿತಗೊಳಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

 

Share This Article
Leave a Comment

Leave a Reply

Your email address will not be published. Required fields are marked *