ಮಳವಳ್ಳಿ ಶಾಸಕ ನರೇಂದ್ರಸ್ವಾಮಿಗೆ ಪಿತೃ ವಿಯೋಗ

Public TV
1 Min Read

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಳವಳ್ಳಿ (Malavalli) ಶಾಸಕ ನರೇಂದ್ರಸ್ವಾಮಿ (Narendraswamy) ಅವರ ತಂದೆ ಪಿ.ಎಸ್.ಮಲ್ಲಯ್ಯ ಚಿಕಿತ್ಸೆ ಫಲಿಸದೇ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ಪುರಗಾಲಿ ಗ್ರಾಮದವರಾದ ಮಲ್ಲಯ್ಯ (93) ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಲ್ಲಯ್ಯ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: MUDA Scam | ಆ.12ರ ಬಳಿಕ ರಾಜ್ಯಪಾಲರ ನಿರ್ಧಾರ ಪ್ರಕಟ?

ಮಲ್ಲಯ್ಯ ತಾಲೂಕು ಬೋರ್ಡ್ ಸದಸ್ಯರಾಗಿ, ಪುರಿಗಾಲಿ ಗ್ರಾ.ಪಂ, ಹಾಲು ಉತ್ಪಾದಕರ ಸಂಘ, ಪ್ರಾಥಮಿಕ ಕೃಷಿ ಪರಿಷತ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಶಾಸಕ ನರೇಂದ್ರಸ್ವಾಮಿ ಸೇರಿ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಹುಟ್ಟೂರು ಪುರಿಗಾಲಿಯಲ್ಲಿ ಮಲ್ಲಯ್ಯರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

Share This Article