ನಿರಂತರ ಮಳೆಯಿಂದಾಗಿ ಜೀವಕಳೆ ಪಡೆದ ಕೊಡಗಿನ ಮಲ್ಲಳ್ಳಿ ಜಲಪಾತ

Public TV
1 Min Read

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಲ್ಲಳ್ಳಿ ಜಲಪಾತ (Mallalli Falls) ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಧಾರಾಕಾರ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ಶಾಂತಹಳ್ಳಿ ಸಮೀಪವಿರುವ ಪ್ರಸಿದ್ಧ ಮಲ್ಲಳ್ಳಿ ಜಲಪಾತವು ಮೈದುಂಬಿ ಹರಿಯುತ್ತಾ ಜೀವಕಳೆ ಪಡೆದಿದೆ.ಇದನ್ನೂ ಓದಿ: ಸಕಲೇಶಪುರ | ಮಳೆಗೆ ರಸ್ತೆ ಕಾಣದೇ ಡಿವೈಡರ್‌ಗೆ ಕಾರು ಡಿಕ್ಕಿ – ಬೆಂಗಳೂರಿನ ಇಬ್ಬರು ಸಾವು

ಹಾಲಿನ ನೊರೆಯಂತೆ ಬೋರ್ಗರೆಯುತ್ತಾ ಧುಮ್ಮಿಕ್ಕುವ ಈ ಜಲಧಾರೆಯು ಪ್ರಕೃತಿ ಪ್ರಿಯರಿಗೆ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಜಲಪಾತದ ವೈಭವ ಕಣ್ಮನ ಸೆಳೆಯುತ್ತಿದೆ. ದೇಶ-ವಿದೇಶಗಳಿಂದ ಆಗಮಿಸುತ್ತಿರುವ ನೂರಾರು ಪ್ರವಾಸಿಗರು ಜಲಪಾತದ ಬಳಿ ಎಂಜಾಯ್ ಮಾಡುತ್ತಿದ್ದಾರೆ. ಈ ನಡುವೆ ನದಿ ಜಲಪಾತಗಳಿಗೆ ಇಳಿಯದಂತೆ ಜಿಲ್ಲಾಡಳಿತ ಅದೇಶ ನೀಡಿದೆ.

ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ನದಿ, ತೊರೆ, ಜಲಪಾತಗಳಿಗೆ ಇಳಿಯುವುದು, ಸ್ನಾನ ಮಾಡುವುದನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಕೆ.ವೆಂಕಟರಾಜ ಅವರು ಆದೇಶ ಹೊರಡಿಸಿದ್ದಾರೆ.

ನದಿಗಳು ತುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಕೂಡ ಮೈದುಂಬಿ ಧುಮ್ಮುಕ್ಕುತ್ತಿವೆ. ಈ ಸಂದರ್ಭದಲ್ಲಿ ಜಲಪಾತದ ತಳ ಭಾಗಕ್ಕೆ ಇಳಿಯುವ ಸಾಹಸ ಮಾಡಿ, ಬಹಳಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಜಲಪಾತದಲ್ಲಿ ಇಳಿಯದಂತೆ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸಿದರೇ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಪ್ರಜ್ವಲ್‌ ಮೊಬೈಲಿನಲ್ಲಿ 2000 ಮಹಿಳೆಯರ ಚಿತ್ರ: ಸಾಕ್ಷ್ಯ ನುಡಿದ ಚಾಲಕ

Share This Article