– ತಡರಾತ್ರಿ ಎಐಸಿಸಿ ಅಧ್ಯಕ್ಷರನ್ನ ಭೇಟಿಯಾದ ಡಿಕೆಶಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನ ಭೇಟಿಯಾಗಿದ್ದಾರೆ.
ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ತಡರಾತ್ರಿ ಡಿಕೆಶಿ (DK Shivakumar) ಭೇಟಿಯಾಗಿದ್ದು, ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಹೀಗಾಗಿ ನವೆಂಬರ್ ಕ್ರಾಂತಿ ಬದಲಿಗೆ ಈ ಶಾಂತಿಯ ಬೆಳವಣಿಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ
ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ. ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಹಲಗೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ; ಸೇವೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ರಾಜ್ಯದ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಒಂದು ಕ್ಲ್ಯಾರಿಟಿಗೆ ಬರೋಣ. ನಿಮ್ಮ ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ. ಹೈಕಮಾಂಡ್ ಮನಸ್ಸಿನಲ್ಲೂ ಒಂದಷ್ಟು ವಿಚಾರಗಳಿವೆ ಎಲ್ಲವೂ ಬಿಹಾರ ಚುನಾವಣೆ ಬಳಿಕ ಮಾತನಾಡೋಣ ಎಂದು ಖರ್ಗೆ ಅವರು ಅಭಯ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ
ಯೆಸ್. ಬಿಹಾರ ವಿಧಾನಸಭಾ ಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರಕ್ಕೆ ಮುಂದಾಗೋ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಒಪ್ಪಿದ ಪಕ್ಷದಲ್ಲಿ ಸಂಪುಟ ಪುನಾರಚನೆ ಮಾಡೋ ಸಾಧ್ಯತೆಗಳಿವೆ. ಸುಮಾರು 17ರಿಂದ 18 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪ್ರಾದೇಶಿಕ ಸಮಾನತೆ, ಶಾಸಕರ ಹಿರಿತನ, ಜಾತಿ ಲೆಕ್ಕಾಚಾರ, ಸ್ಥಳಿಯ ನಾಯಕತ್ವ ಎಲ್ಲವನ್ನೂ ಪರಿಗಣಿಸಿ ಹಿರಿಯ ಶಾಸಕರಿಗೆ ಆದ್ಯತೆ ಕೊಡೋ ಸಾಧ್ಯತೆಗಳಿವೆ.