50 ರಿಂದ 100 ಕೋಟಿ ಕೊಟ್ಟು ಕರ್ನಾಟಕದಲ್ಲಿ ನಮ್ಮ ಶಾಸಕರ ಖರೀದಿಗೆ ಯತ್ನಿಸಿದ್ರಿ – ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಖರ್ಗೆ ಕಿಡಿ

Public TV
1 Min Read

ನವದೆಹಲಿ: ಕರ್ನಾಟಕ ವಿಧಾನಸಭೆ ಬಳಿಕ ಬಹುಮತ ಸಾಬೀತು ಪಡಿಸಲು ಬಿಜೆಪಿಯವರು ಶಾಸಕರ ಖರೀದಿಗೆ ಮುಂದಾಗಿದ್ದರು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ವೇಳೆ ಮಾತನಾಡಿದ ಅವರು, ಬಿಜೆಪಿ ನಾಯಕರು ದೂರವಾಣಿ ಕರೆ ಮಾಡಿ ಆಪರೇಷನ್ ಕಮಲಕ್ಕೆ ಮುಂದಾಗಿದ್ದರು. ನಮ್ಮ ಹತ್ತಿರ ಅವರು ನಡೆಸಿದ ಸಂಭಾಷಣೆಯ ಧ್ವನಿಯ ಮುದ್ರಣವಿದೆ ಎಂದು ದೂರಿದರು. ಆದರೆ ಈ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ನಿಮ್ಮ ಸಮಯ ಮುಗಿದಿದೆ. ನೀವು ಹೊರಗೆ ಈ ಆರೋಪ ಮಾಡಿ, ಲೋಕಸಭೆಯಲ್ಲಿ ಆರೋಪ ಸಲ್ಲದು ಎಂದು ಸೂಚಿಸಿದ್ದರು. ಆದರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಹಿಂದಿನ ಸಾಲಿನಲ್ಲಿ ಕುಳಿತಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ, ನಮ್ಮ ಬಳಿ ಸೂಕ್ತ ದಾಖಲೆಗಳಿವೆ. ಹೀಗಾಗಿ ಆರೋಪ ಮಾಡುತ್ತಿದ್ದೇವೆ ಎಂದು ಗರಂ ಆದರು.

ಕಾಂಗ್ರೆಸ್ ರಾಷ್ಟ್ರದ ಬಹು ದೊಡ್ಡ ಪಕ್ಷ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಉಳಿದ ಪಕ್ಷಗಳಿಗೆ 30 ನಿಮಿಷ ಕಾಲಾವಕಾಶ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೂ ಅಷ್ಟೇ ಸಮಯ ನಿಗಧಿಯಾಗಿದೆ. ಹೀಗಾಗಿ 130 ಕೋಟಿ ಜನರಿಗೆ ಬಿಜೆಪಿಯ ಭ್ರಷ್ಟಾಚಾರ ಸಾಬೀತು ಪಡಿಸಲು ಇಷ್ಟು ಸಮಯ ಸಾಲುವುದಿಲ್ಲ ಎಂದು ಹೇಳಿದರು.

ತಮ್ಮ ಭಾಷಣದ ವೇಳೆ ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ಮಾಡಲು ಹಲವು ಕ್ರಮಗಳನ್ನು ಎದುರಿಸಿದೆ ಎಂದು ಆರೋಪಿಸಿದರು. ಅಲ್ಲದೇ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ಬಿಜೆಪಿ ಮರೆತಿದೆ ಎಂದು ತಮ್ಮ ಮಾತಿನ ಮೂಲಕ ತಿವಿದರು.

ನಮ್ಮ ಆಡಳಿತ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಬಗೆ ಹರಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ರೈತರ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ ಹೆಚ್ಚಳವಾಗಿದೆ. ಆದರೆ ಅವರು ಅಂದಾನಿ, ಅಂಬಾನಿ ಬಗ್ಗೆ ಮಾತನಾಡುತ್ತಿದ್ದು, ರೈತರ ಪರ ಮಾತನಾಡಿಲ್ಲ. ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಿಜೆಪಿ ಅವರು ಅಂಗೀಕರಿಸಿಲ್ಲ ಎಂದು ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *