ಬೆಳಗಾವಿ: ಉತ್ತರ ಕರ್ನಾಟಕದ (North Karnataka) ಅಭಿವೃದ್ಧಿಗೆ ಕಾರಣರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಭಾರತ ರತ್ನ(Bharat Ratna) ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ನಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ವಿಶೇಷ ಅಭಿವೃದ್ಧಿಗಾಗಿ ಭಾರತದ ಸಂವಿಧಾನಕ್ಕೆ ಸೇರಿಸಲಾದ ಅನುಚ್ಛೇದ 371(ಜೆ) ಅವಿರೋಧಾಗಿ ಪಾಸ್ ಆಗಿದೆ. ಸಚಿವರಾಗಿದ್ದಾಗ ರಾಜ್ಯಕ್ಕೆ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಸೇವೆ ಅಪಾರವಾಗಿದೆ. ಹೀಗಾಗಿ ಖರ್ಗೆ ಅವರಿಗೆ ಭಾರತ ರತ್ನ ನೀಡಬೇಕೆಂದು ಹೇಳಿದರು. ಇದನ್ನೂ ಓದಿ: ಕೃಷ್ಣಬೈರೇಗೌಡರಿಂದ ಕೆರೆ, ಸ್ಮಶಾನ ಜಾಗ ಕಬಳಿಕೆ- ಬಿಜೆಪಿಯಿಂದ ಗಂಭೀರ ಆರೋಪ
ಮಲ್ಲಿಕಾರ್ಜುನ ಖರ್ಗೆ ಅವರು ದೀನ-ದಲಿತ ಪರ ಕೆಲಸ ಮಾಡಿದ್ದಾರೆ. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ ತಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈಲು ಇಲ್ಲದ ಭಾಗಗಳಿಗೆ ರೈಲು ತಂದಿದ್ದಾರೆ. ಗಾಂಧೀಜಿ, ನೆಹರು, ಇಂದಿರಾ, ರಾಜೀವ್ ಗಾಂಧಿ, ತಾಯಿ ಸೋನಿಯಾ ಅವರು ಅಲಂಕರಿಸಿದ ಹುದ್ದೆಯನ್ನು ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರ ಸೇವೆ ಪರಿಗಣಿಸಿ ಖರ್ಗೆ ಅವರನ್ನು ಗೌರವಿಸಬೇಕೆಂದು ಕೇಳಿದರು.

