ಇದು ನಿಮ್ಮ ಹೋರಾಟಕ್ಕೆ ಸಿಕ್ಕ ವಿಜಯವಾಗಿದೆ: ಮಮತಾ ಬ್ಯಾನರ್ಜಿ

Public TV
1 Min Read

ಕೋಲ್ಕತ್ತಾ: ಬಿಜೆಪಿಯು ನಿಮ್ಮನ್ನು ನಡೆಸಿಕೊಂಡ ಕ್ರೌರ್ಯದಿಂದ ವಿಚಲಿತರಾಗದೇ ಪಟ್ಟುಬಿಡದೇ ಹೋರಾಡಿದ್ದೀರಾ. ಇದು ನಿಮ್ಮ ಹೋರಾಟಕ್ಕೆ ಸಿಕ್ಕ ವಿಜಯವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

modi

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿಯು ನಿಮ್ಮನ್ನು ನಡೆಸಿಕೊಂಡ ಕ್ರೌರ್ಯದಿಂದ ವಿಚಲಿತರಾಗದೇ ಪಟ್ಟುಬಿಡದೇ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

ಈ ಬಗ್ಗೆ ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ಅವರು ಸಹ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳುವುದರ ಜೊತೆಗೆ, ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು. ಜೈ ಹಿಂದ್ ಜೈ ಹಿಂದ್ ಕಾ ಕಿಸಾನ್ ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅನ್ನದಾತರ ಸತ್ಯಾಗ್ರಹ ಅಹಂಕಾರ ಅಡಗಿಸಿತು: ರಾಹುಲ್ ಗಾಂಧಿ

Share This Article
Leave a Comment

Leave a Reply

Your email address will not be published. Required fields are marked *