ಪದಗ್ರಹಣ ಕಾರ್ಯಕ್ರಮದಲ್ಲಿ ಹೆಚ್‍ಡಿಡಿ ಮುಂದೆ ಬೇಸರ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

Public TV
1 Min Read

ಬೆಂಗಳೂರು: ಸಿಎಂ ಪದಗ್ರಹಣ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಪ್ರಧಾನಿ ದೇವೇಗೌಡರ ಎದುರು ಬೇಸರ ವ್ಯಕ್ತಪಡಿಸಿದ್ದಾರೆ.

ಪದ ಗ್ರಹಣ ಮುನ್ನ ವಿಧಾನಸೌಧದ ಸುತ್ತ ಮುತ್ತ ಮಳೆಯಾಗಿತ್ತು. ಸಾಮಾನ್ಯವಾಗಿ ವಿಧಾನಸೌಧದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ಮಮತಾ ಬ್ಯಾನರ್ಜಿ ಟ್ರಾಫಿಕ್ ನಲ್ಲಿ ಸಿಲುಕಿದ್ರು. ಪದಗ್ರಹಣ ಕಾರ್ಯಕ್ರಮಕ್ಕೆ ತಡವಾಗುತ್ತೆಂದು ಅರಿತ ಮಮತಾ ಬ್ಯಾನರ್ಜಿ ಕೆಲವು ಮೀಟರ್ ನಷ್ಟು ನಡೆದುಕೊಂಡು ವೇದಿಕೆಯತ್ತ ಬಂದರು.

ವಿಧಾನಸೌಧದ ವೇದಿಕೆಯತ್ತ ಆಗಮಿಸುತ್ತಿದ್ದಂತೆ ಸ್ಥಳದಲ್ಲಿದ್ದ ಡಿಐಜಿ ನೀಲಮಣಿ ರಾಜು ಮೇಲೆ ಕೋಪಗೊಂಡರು. ನಂತರ ಮುಂದೆ ಬಂದು ಹೆಚ್.ಡಿ.ದೇವೇಗೌಡರ ಬಳಿಯೂ ಟ್ರಾಫಿಕ್‍ನಲ್ಲಿ ಸಿಲುಕಿದ್ದರಿಂದ ನಡೆದುಕೊಂಡು ಬರುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *