ಬಿರ್ಭೂಮ್ ಹಿಂಸಾಚಾರ – ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ಕೊಟ್ಟ ಮಮತಾ ಬ್ಯಾನರ್ಜಿ

Public TV
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಂಪರ್‍ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಹತ್ತು ಮಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಈ ಹತ್ತು ಜನರನ್ನು ಕೆಲಸಕ್ಕೆ ಸೇರಿಸಿಕೊಳ್ಳುವಾಗ ಯಾವುದೇ ರೀತಿಯ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಬಿರ್ಭುಮ್ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಸೂಚಿಸಿದರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಮಾತನ್ನು ಉಳಿಸಿಕೊಂಡಿದ್ದೇನೆ. ಇಂದು ನಾನು 10 ಮಂದಿಗೆ ಡಿ ಗ್ರೂಪ್‌ ಉದ್ಯೋಗ ನೀಡುತ್ತಿದ್ದೇನೆ. ಆದರೆ ಬಿರ್ಭುಮ್ ಹಿಂಸಾಚಾರದಲ್ಲಿ ನಾವು ಕಳೆದುಕೊಂಡವರನ್ನು ಎಂದಿಗೂ ಹಿಂತಿರುಗಿಸಲಾಗುವುದಿಲ್ಲ, ಆದರೆ ಎಲ್ಲರೂ ಮುಂದಕ್ಕೆ ಸಾಗಿ, ಬದುಕು ನಡೆಸಬೇಕಾಗಿದೆ ಎಂದರು. ಇದನ್ನೂ ಓದಿ: ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಟಿಎಂಸಿ ನಾಯಕ ಬಹದ್ದೂರ್ ಶೇಖ್ ಅವರ ಹತ್ಯೆಯ ಬಳಿಕ ದುಷ್ಕರ್ಮಿಗಳ ಗುಂಪೊಂದು ಕಳೆದ ತಿಂಗಳು ಪಶ್ಚಿಮ ಬಂಗಾಳದ ಬಿರ್ಭೂಮ್‍ನ ರಾಮ್‍ಪುರಹತ್ ಪ್ರದೇಶದಲ್ಲಿ ಅನೇಕ ಗುಡಿಸಲುಗಳಿಗೆ ಬೆಂಕಿ ಹಚ್ಚಿದರು. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದರು.

Share This Article
Leave a Comment

Leave a Reply

Your email address will not be published. Required fields are marked *