ಖುದ್ದಾಗಿ ತಟ್ಟೆ ಹಿಡಿದು ಮಹಾಮೈತ್ರಿ ನಾಯಕರಿಗೆ ತಿಂಡಿ ಬಡಿಸಿದ ದೀದಿ

Public TV
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ವಿವಿಧ ಪಕ್ಷಗಳ ನಾಯಕರಿಗೆ ತಿಂಡಿ ಬಡಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಮಹಾಘಟಬಂಧನ್ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ವಿಪಕ್ಷ ನಾಯಕರ ಒಕ್ಕೂಟದ ಬೃಹತ್ ಸಮಾವೇಶವನ್ನು ಕೋಲ್ಕತ್ತಾದಲ್ಲಿ ಶನಿವಾರ ನಡೆಸಿದ್ದರು. ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ರಾಷ್ಟ್ರೀಯ ಜನತಾದಳ, ಡಿಎಂಕೆ, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ 23 ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಸಮಾವೇಶದ ಬಳಿಕ ನಾಯಕರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಮಮತಾ ಬ್ಯಾನರ್ಜಿ ಅವರೇ ಎಲ್ಲ ನಾಯಕರಿಗೆ ತಿಂಡಿ ಬಡಿಸಿದ್ದಾರೆ.

ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರಿಗೆ ಮಮತಾ ಬ್ಯಾನರ್ಜಿ ತಿಂಡಿ ಬಡೆಸುತ್ತಿರುವ ಫೋಟೋವನ್ನು ಸಂಜಯ್ ಯಾದವ್ ಎಂಬವರು ಟ್ವೀಟ್ ಮಾಡಿದ್ದಾರೆ. ಜೊತೆಗೆ ಗುಜರಾತ್‍ನ ಹೋರಾಟಗಾರ ಹಾರ್ದಿಕ್ ಪಾಟೇಲ್ ಅವರಿಗೂ ತಿಂಡಿ ಬಡಿಸುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಫೋಟೋದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಡಿಎಂಕೆ ನಾಯಕ ಎಂಕೆ ಸ್ಟ್ಯಾಲಿನ್, ನ್ಯಾಷನಲ್ ಕಾಂಫರೆನ್ಸ್ ಅಧ್ಯಕ್ಷ ಫಾರುಕ್ ಅಬ್ದುಲ್ಲಾ, ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಶರದ್ ಪವಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜಿಗ್ನೀಶ್ ಮೇವಾನಿ ಸೇರಿದಂತೆ ಅನೇಕ ನಾಯಕರು ಇದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *