ವಾಹನ ಸವಾರನ ಮೇಲೆ‌ ಎಕ್ಸ್‌ಪ್ರೆಸ್‌ ವೇ ಟೋಲ್ ಸಿಬ್ಬಂದಿ ಹಲ್ಲೆ

Public TV
1 Min Read

ರಾಮನಗರ: ವಾಹನ ಸವಾರನ ಮೇಲೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ (Bengaluru Mysuru Expressway) ಕಣಿಮಿಣಿಕೆ ಟೋಲ್ ಪ್ಲಾಜಾ (Kaniminike toll plaza) ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

ತಣಿಸಂದ್ರ (Thanisandra) ನಿವಾಸಿ ವಿಶ್ವನಾಥ್ ಎಂಬವರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಫಾಸ್ಟ್ ಟ್ಯಾಗ್‍ನಲ್ಲಿ (FASTag) ಹಣ ಕಡಿತವಾಗದ ವಿಚಾರಕ್ಕೆ ವಿಶ್ವನಾಥ್ ಹಾಗೂ ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಟೋಲ್ ಸಿಬ್ಬಂದಿ ಒಟ್ಟಾಗಿ ಸೇರಿ ವಿಶ್ವನಾಥ್ ಅವರಿಗೆ ಥಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಫೈಟಾ, ಬಂಟ-ಬಿಲ್ಲವ ಫೈಟಾ?

ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಕುಂಬಳಗೂಡು (Kumbalagodu) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್

Share This Article