ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

Public TV
1 Min Read

ಉಡುಪಿ: ಹೆಂಡತಿ ಮಗುವಿನ ಜೊತೆ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಕೊಚ್ಚಿ ಕೊಂದ ಘಟನೆ ಪುತ್ತೂರಿನಲ್ಲಿ (Putturu) ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ. ವಿನಯ್ ಮನೆ ರಾತ್ರಿ ವೇಳೆ ಮೂವರು ದುಷ್ಕರ್ಮಿಗಳು ಬಂದಿದ್ದರು. ಈ ವೇಳೆ, ಸ್ನೇಹಿತರಿರಬಹುದು ಎಂದು ಮನೆಯವರು ಒಳಗೆ ಬಿಟ್ಟಿದ್ದಾರೆ. ಬಳಿಕ ಮೂವರು ಹೆಂಡತಿ ಮತ್ತು ಮಗುವಿನ ಜೊತೆ ಮಲಗಿದ್ದ ವಿನಯ್ ಮೇಲೆ ತಲ್ವಾರ್‍ನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ದಾಳಿ ವೇಳೆ ತಡೆಯಲು ಹೋದ ಪತ್ನಿಗೆ ಸಹ ಗಾಯವಾಗಿದೆ. ಇದನ್ನೂ ಓದಿ: Delhi | ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

ಉಡುಪಿ (Udupi) ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

Share This Article