ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ

Public TV
1 Min Read

ಹೈದರಾಬಾದ್: ತನ್ನ ಗೆಳತಿಗೆ (Girlfriend) ಸಂದೇಶ ಕಳುಹಿಸಿದ್ದಕ್ಕಾಗಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ (Friend) ಭೀಕರವಾಗಿ ಕೊಲೆಗೈದು (Murder), ಶಿರಚ್ಛೇದ ಮಾಡಿ (Beheading), ದೇಹದ ಆಂತರಿಕ ಭಾಗಗಳನ್ನು ಕಿತ್ತು ಹಾಕಿ, ಕೊನೆಗೆ ಪೊಲೀಸರಿಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

ವರದಿಗಳ ಪ್ರಕಾರ ಆರೋಪಿಯ ಗೆಳತಿ ಈ ಹಿಂದೆ ಆತನ ಸ್ನೇಹಿತನೊಂದಿಗೆ ಸಂಬಂಧ ಹೊಂದಿದ್ದಳು. ಆಕೆಗೆ ಸಂತ್ರಸ್ತ ಯುವಕ ಸಂದೇಶ ಕಳುಹಿಸುತ್ತಿದ್ದ. ಇದರಿಂದ ಕೋಪಗೊಂಡಿದ್ದ ಆರೋಪಿ, ಸ್ನೇಹಿತನ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆತನ ಹೃದಯ, ಖಾಸಗಿ ಭಾಗಗಳನ್ನು ಕಿತ್ತಿದ್ದು, ಬೆರಳುಗಳನ್ನೂ ಕತ್ತರಿಸಿದ್ದಾನೆ ಎನ್ನಲಾಗಿದೆ.

ಘಟನೆಯೇನು?
ಆರೋಪಿ ಹರಿಹರ ಕೃಷ್ಣ ಹಾಗೂ ಕೊಲೆಯಾದ ಯುವಕ ನವೀನ್ ಗೆಳೆಯರಾಗಿದ್ದು, ಈ ಹಿಂದೆ ದಿಲ್‌ಸುಖ್‌ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಬ್ಬರೂ ಅದೇ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು. ಆದರೆ ನವೀನ್ ಮೊದಲು ತನ್ನ ಪ್ರೇಮವನ್ನು ಯುವತಿಗೆ ತಿಳಿಸಿದ್ದ. ಈ ಪ್ರಸ್ತಾಪವನ್ನು ಆಕೆ ಒಪ್ಪಿಕೊಂಡಿದ್ದು, 1-2 ವರ್ಷದ ಬಳಿ ಅವರಿಬ್ಬರೂ ಬೇರೆಯಾಗಿದ್ದರು. ಬಳಿಕ ಯುವತಿ ಹರಿಹರ ಕೃಷ್ಣನೊಂದಿಗೆ ಸಂಬಂಧ ಬೆಳೆಸಿದ್ದಳು. ಇದನ್ನೂ ಓದಿ: ಆಸ್ತಿ ಮುಟ್ಟುಗೋಲು ಹಾಕಲು ಬಂದಿದ್ದಕ್ಕೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

ಆದರೆ ಯುವತಿ ನವೀನ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಆಕೆಗೆ ನವೀನ್ ಯಾವಾಗಲೂ ಸಂದೇಶ ಹಾಗೂ ಕರೆ ಮಾಡುತ್ತಿದ್ದ. ಆದರೆ ಇದರಿಂದ ಕೃಷ್ಣ ತೀವ್ರ ಅಸಮಾಧಾನಗೊಂಡಿದ್ದ. ಈ ಹಿನ್ನೆಲೆ ಕೃಷ್ಣ ನವೀನ್ ಹತ್ಯೆ ನಡೆಸಲು ಸುಮಾರು 3 ತಿಂಗಳು ಕಾದು ಕುಳಿತಿದ್ದ.

ಫೆಬ್ರವರಿ 17ರಂದು ಇಬ್ಬರೂ ಗೆಳೆಯರು ಮದ್ಯಪಾನ ಮಾಡಿ ಜಗಳವಾಡಿಕೊಂಡಿದ್ದರು. ಈ ವೇಳೆ ಕೃಷ್ಣ ನವೀನ್ ಕೊಲೆ ಮಾಡಿ, ಆತನ ತಲೆಯನ್ನು ದೇಹದಿಂದ ಬೇರ್ಪಡಿಸಿದ್ದ. ಆಂತರಿಕ ಅಂಗಾಂಗಗಳನ್ನೂ ಕಿತ್ತಿದ್ದ. ಬಳಿಕ ಆತನ ಮೃತದೇಹದ ಫೋಟೋ ಕ್ಲಿಕ್ಕಿಸಿ, ತನ್ನ ಗೆಳತಿಗೆ ವಾಟ್ಸಪ್‌ನಲ್ಲಿ ಕಳುಹಿಸಿದ್ದ.

ಹರಿಹರ ಕೃಷ್ಣ ಕೃತ್ಯ ನಡೆಸಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಆತನ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸಿದ್ದಾರೆ. ಮೃತ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ

Share This Article
1 Comment

Leave a Reply

Your email address will not be published. Required fields are marked *