ಮೊಳೆ ಇಟ್ಟು ವಾಹನ ಪಂಚರ್ – ಡೋರ್ ತೆಗೆದು ಇಳಿಯುತ್ತಿದ್ದಂತೆ ಭೀಕರ ಮರ್ಡರ್!

Public TV
1 Min Read

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಚನ್ನರಾಯಪಟ್ಟಣದ (Channarayapatna) ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ನಂಜುಂಡೇಗೌಡ (44) ಎಂದು ಗುರುತಿಸಲಾಗಿದೆ. ರೈತರಿಂದ ಹಾಲು ಸಂಗ್ರಹ ಮಾಡಿಕೊಂಡು ಡೈರಿಗೆ ಹಾಲು ಹಾಕಲು ಮಹೀಂದ್ರ ಜಿತೋ ವಾಹನದಲ್ಲಿ ನಂಜುಂಡೇಗೌಡ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಮರದ ಪಟ್ಟಿಗೆ ಮೊಳೆ ಇಟ್ಟು ವಾಹನ ಪಂಚರ್ ಮಾಡಿದ್ದಾರೆ. ವಾಹನ ಪಂಕ್ಚರ್ ಆದ ಕೂಡಲೇ ಕೆಳಗಿಳಿದ ನಂಜುಂಡೇಗೌಡರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ.

ದುಷ್ಕರ್ಮಿಗಳು ಲಾಂಗ್‌ಗಳಿಂದ ನಂಜುಂಡೇಗೌಡರ ತಲೆ, ಕುತ್ತಿಗೆ, ಕೈಯನ್ನು ಕತ್ತರಿಸಿದ್ದಾರೆ. ಬಳಿಕ ಲಾಂಗ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share This Article