ಜನ್ರ ಮುಂದೆ ಮಾರಕಾಸ್ತ್ರಗಳಿಂದ ಕತ್ತು ಸೀಳಿ ಯುವಕನ ಬರ್ಬರ ಕೊಲೆ!

Public TV
1 Min Read

ಬೆಂಗಳೂರು: ನಗರದ ತುಮಕೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜನರ ಎದುರೇ ಕಾರಿನಲ್ಲಿದ್ದ ಯುವಕನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಬರ್ಬರ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಚಿಕ್ಕಬಿದರಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ. ಚಿಕ್ಕಬಿದರಕಲ್ಲು ಗ್ರಾಮದ ವಿನಾಯಕ ನಗರದ ನಿವಾಸಿ ಪವನ್(26) ಕೊಲೆಯಾದ ವ್ಯಕ್ತಿ. ಈತ ಖಾಸಗಿ ಕಂಪನಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಇಂದು ಭಾನುವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದು, ತನ್ನ ಸ್ನೇಹಿತರ ಜೊತೆ ದಾಸರಹಳ್ಳಿಯ ಚಿತ್ರಮಂದಿರದಲ್ಲಿ ಭರ್ಜರಿ ಚಿತ್ರವನ್ನ ನೋಡಿ ಮನೆಗೆ ವಾಪಸ್ ತೆರಳುವ ವೇಳೆ ಬೈಕಿಗೆ ಕಾರು ಡಿಕ್ಕಿಯಾಗಿದೆ. ಅಷ್ಟೇ ಇದನ್ನೆ ನೆಪವನ್ನಾಗಿಟ್ಟುಕೊಂಡ ದುಷ್ಕರ್ಮಿಗಳು ಕಾರಿನಲ್ಲಿದ್ದ ಪವನ್ ಜೊತೆ ಜಗಳವಾಡಿದ್ದಾರೆ. ಏಕಾ ಏಕಿ ಬೈಕಿನಲ್ಲಿದ್ದವರು ಮಾರಕಾಸ್ತ್ರಗಳಿಂದ ಕುತ್ತಿಗೆ ಸೀಳಿ ಪರಾರಿಯಾಗಿದ್ದಾರೆ.

ಸದ್ಯ ಪೊಲೀಸ್ ಮಾಹಿತಿ ಪ್ರಕಾರ ಮೃತ ಪವನ್ ಚಲಿಸುತ್ತಿದ್ದ ಐ 20 ಕಾರು ಹಾಗೂ ಬೈಕ್ ಗೆ ತಗುಲಿದ ಪರಿಣಾಮ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪವನ್ ಮೃತ ದೇಹವನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *