ಹುಬ್ಬಳ್ಳಿ, ಬೆಳಗಾವಿ ನಂತರ ವಿಜಯಪುರದಲ್ಲೂ ಹುಟ್ಟುಹಬ್ಬಕ್ಕೆ ತಲ್ವಾರ್ ನಿಂದ ಕೇಕ್ ಕಟ್!

Public TV
1 Min Read

ವಿಜಯಪುರ: ಇತ್ತೀಚೆಗಷ್ಟೆ ಹುಬ್ಬಳ್ಳಿಯಲ್ಲಿ ಹಾಗೂ ಬೆಳಗಾವಿಯಲ್ಲಿ ಕೆಲ ಜನರು ತಲ್ವಾರ್ ನಿಂದ ಕೇಟ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ದೊಡ್ಡ ಸುದ್ದಿಯಾಗಿದ್ರು. ಆದ್ರೆ ಇದೀಗ ವಿಜಯಪುರದಲ್ಲೂ ಸಹ ಇದೇ ಮಾದರಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲಾಗಿದೆ.

ವಿಜಯಪುರ ನಗರ ಬಿಜೆಪಿ ಅಧ್ಯಕ್ಷ ಶಿವರುದ್ರ ಬಾಗಲಕೋಟ ಈ ರೀತಿ ಬರ್ತ್ ಡೆ ಆಚರಿಸಿಕೊಂಡಿದ್ದಾರೆ. ಜೂನ್ 29ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವ ಸಮಯದಲ್ಲಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿದ್ದು, ಅಲ್ಲದೆ ಈ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಾರೆ.

ಈ ಕುರಿತು ಪೊಲೀಸ್ ಇಲಾಖೆ ಇಂತಹವರಿಗೆ ಖಡಕ್ ಎಚ್ಚರಿಕೆ ನೀಡುವ ಮೂಲಕ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *