ಕ್ಷುಲ್ಲಕ ವಿಚಾರದಲ್ಲಿ ಪ್ರಾರಂಭವಾದ ಜಗಳ- ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ದಾಂಧಲೆ

Public TV
0 Min Read

ಬೆಂಗಳೂರು: ಕುಡಿದ ಮತ್ತಿನಲ್ಲಿದ್ದ ಯುವಕ ಕ್ಷುಲಕ ವಿಚಾರಕ್ಕೆ ಜಗಳ ಪ್ರಾರಂಭಿಸಿ ಮಚ್ಚು ಹಿಡಿದು ದಾಂಧಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಚಿಕ್ಕಮಾರನಹಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕುಡಿದ ಮತ್ತಿನಲ್ಲಿ ಸುರೇಶ್ ಹಾಗೂ ಲಕ್ಷ್ಮಿ ನಾರಾಯಣ್ ಎಂಬವರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಬೈದಾಡಿಕೊಂಡು ಸುರೇಶ್ ಮನೆಗೆ ಹೋಗಿದ್ದಾನೆ. ನಂತರ ಲಕ್ಷ್ಮಿನಾರಾಯಣ್ ಮಚ್ಚು ಹಿಡಿದು, ಸುರೇಶ್ ನ ಮನೆ ಬಾಗಿಲು ಮುರಿದಿದ್ದಾನೆ.

ಈ ವೇಳೆ ಗ್ರಾಮದಲ್ಲಿ ಲಕ್ಷ್ಮಿನಾರಾಯಣನ ರಂಪಾಟಕ್ಕೆ, ಗ್ರಾಮಸ್ಥರು ಕೆಲಕಾಲ ಭಯಬೀತರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ದಾಂಧಲೆ ಮಾಡಿದ ಲಕ್ಷ್ಮಿನಾರಾಯಣನನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *