ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

Public TV
1 Min Read

ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಬಂಧಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದಾರ್ ಬಂಧಿತ ಆರೋಪಿ. ಈತ ಹೆಸ್ಕಾಂನಲ್ಲಿ ಲೈನ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆ ಕೊಡಿಸುವುದಾಗಿ ಹೇಳಿ ಹಣ ಪಡೆದು 30ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದ.

ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನರಿಗೆ ಹಣ ಪಡೆದು ವಂಚನೆ ಮಾಡಿದ್ದ. ಹಣ ವಾಪಸ್ ಕೊಡುವಂತೆ ಕೇಳಿದಾಗ ತಲೆಮರೆಸಿಕೊಂಡಿದ್ದ.

ಇದ್ರಿಂದ ಕಂಗಾಲಾದ ಜನ ಬೆಳಗಾವಿ ಅಧಿವೇಶನದ ವೇಳೆ ಈ ವಿಷಯವನ್ನ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ರು. ಈ ವೇಳೆ ಡಿಕೆಶಿ ಸೂಚನೆ ಮೇರೆಗೆ ಹನುಮಂತ ಉಗಾರೆ ಎಂಬುವರು ದೂರು ನೀಡಿದ್ರು. ಹಣ ನೀಡಿದ್ದನ್ನು ಉಗಾರೆ ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಇವರ ದೂರು ಹಾಗೂ ಸಾಕ್ಷಿ ಮೇರೆಗೆ ಅನ್ವರ್‍ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *