ವಿಡಿಯೋ: ವೋಟ್ ಹಾಕಲ್ಲ ಎಂದಿದ್ದಕ್ಕೆ ದಲಿತ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ

Public TV
1 Min Read

ಭೋಪಾಲ್: ದಲಿತ ಶಿಕ್ಷಕರೊಬ್ಬರು ಉಪ-ಚುನಾವಣೆಯಲ್ಲಿ ತಮಗೆ ಮತ ನೀಡಲ್ಲ ಎಂದು ಹೇಳಿದಕ್ಕೆ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶ ಅಟೇಲ್ ಎಂಬಲ್ಲಿ ನಡೆದಿದೆ.

ಕಲ್ಯಾಣ್ ಎಂಬವರೇ ಹಲ್ಲೆಗೊಳಗಾದ ಸರ್ಕಾರಿ ಶಾಲೆಯ ಶಿಕ್ಷಕ. ಅಟೇಲ್ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಲ್ಯಾಣ್ ಅವರಿಗೆ ತಮ್ಮ ಪರವಾಗಿ ವೋಟ್ ಹಾಕುವಂತೆ ಸ್ಥಳೀಯರು ಬೆದರಿಕೆ ಹಾಕಿದ್ದರು. ಆದರೆ ಸ್ಥಳೀಯ ಮುಖಂಡರ ಬೆದರಿಕೆಗೆ ಹೆದರದ ಕಲ್ಯಾಣ್ ನನ್ನ ಇಚ್ಛೆಯಂತೆ ಮತ ಚಲಾಯಿಸುತ್ತೇನೆ ಅಂತಾ ತಿಳಿಸಿ, ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಕಿದ್ದವರ ವಿರುದ್ಧ ದೂರನ್ನು ಸಹ ದಾಖಲಿಸಿದ್ದರು.

ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಹಿಂದಿರುಗುವಾಗ ಮಾರ್ಗ ಮಧ್ಯ ಅಡ್ಡಗಟ್ಟಿದ್ದ ಮೂವರು ದುಷ್ಕರ್ಮಿಗಳು ಲಾಠಿ-ಕಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಘಟನಾ ಸ್ಥಳದಲ್ಲಿ ಸಾಕಷ್ಟು ಜನರಿದ್ದರು ಕಲ್ಯಾಣ್ ಅವರಿಗೆ ಸಹಾಯ ಮಾಡದೇ ನೋಡುತ್ತಾ ನಿಂತಿದ್ದಾರೆ. ಘಟನೆ ಬಳಿಕ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶೀಘ್ರವೇ ಮೂವರು ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಹಲ್ಲೆಗೊಳಗಾದ ಶಿಕ್ಷಕ ಕಲ್ಯಾಣ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಯಾಣ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

 

Share This Article
Leave a Comment

Leave a Reply

Your email address will not be published. Required fields are marked *