ತವರು ಸೇರಿದ್ದ ಪತ್ನಿಯನ್ನು ಹಾಡಹಗಲೇ ಅಪಹರಿಸಿದ ಪತಿ!

Public TV
1 Min Read

– ಎಳೆದೊಯ್ಯುವ ದೃಶ್ಯ ಸಿಟಿವಿಯಲ್ಲಿ ಸೆರೆ

ದಾವಣಗೆರೆ: ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿ ತವರು ಸೇರಿದ್ದ ಪತ್ನಿಯನ್ನು (Wife) ಪತಿಯ ಕುಟುಂಬಸ್ಥರು ಅಮಾನವೀಯವಾಗಿ ಎಳೆದೊಯ್ದ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ.

ಕೊಪ್ಪ ಬಳಿಯ ನರಸೀಪುರದ ನಿವಾಸಿ ಕಾರ್ತಿಕ್ ಎಂಬಾತನಿಗೆ ದಿಡಗೂರಿನ ಅನುಂಧತಿ ಎಂಬಾಕೆಯನ್ನು 4 ವರ್ಷಗಳ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಇತ್ತೀಚೆಗೆ ಪತಿಯ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಆರೋಪ ಮಾಡಿ ಅನುಂಧತಿ ತವರು ಮನೆ ಸೇರಿದ್ದಳು.

ಮಂಗಳವಾರ ಬೆಳಗ್ಗೆ ಅನುಂಧತಿಯನ್ನು ಪತಿ ಹಾಗೂ ಆತನ ಕುಟುಂಬಸ್ಥರು ಅಮಾನುಷವಾಗಿ ಎಳೆದು ಕಾರಿನಲ್ಲಿ ಅಪಹರಿಸಿದ್ದಾರೆ. ಈ ವೇಳೆ ತಡೆಯಲು ಬಂದ ಅನುಂಧತಿ ಕುಟುಂಬಸ್ಥರ ಮೇಲೆ ಪತಿ ಹಾಗೂ ಆತನ ಕುಟುಂಬಸ್ಥರು ಹಲ್ಲೆಗೂ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಿಡ್ಯ್ನಾಪ್‍ನ ಭಯನಾಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಹೊನ್ನಾಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article