ತಾಯಿಯ ಮುಂದೆಯೇ ಸೋದರನ ಕೊಂದ ತಮ್ಮ

Public TV
1 Min Read

ದಾವಣಗೆರೆ: ಕ್ಷುಲಕ ಕಾರಣಕ್ಕೆ ಸಹೋದರನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ.

ಜಯರಾಮ್ (45) ಕೊಲೆಯಾದ ವ್ಯಕ್ತಿ. ತಮ್ಮ ಮಹಾಂತೇಶ್ ಈ ಕೃತ್ಯ ಎಸಗಿದ್ದು, ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಈ ಘಟನೆ ನಡೆದಿದೆ. ಆರೋಪಿ ಮಹಾಂತೇಶ್ ತಾಯಿಯೊಂದಿಗೆ ಜಗಳ ಮಾಡುತ್ತಿದ್ದನು. ಇದನ್ನು ಪ್ರಶ್ನೆ ಮಾಡಿದ ಅಣ್ಣ ಜಯರಾಮ್‍ಗೆ ಕಬ್ಬಿಣದ ರಾಡ್ ನಿಂದ ಹೊಡೆದಿದ್ದಾನೆ.

ಪರಿಣಾಮ ತೀವ್ರಗಾಯಗೊಂಡ ಜಯರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಸುಕಿನ ಜಾವ 3 ಗಂಟೆಗೆ ಮೃತಪಟ್ಟಿದ್ದಾರೆ. ಪೊಲೀಸರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *