ಸೀಬೆ ಹಣ್ಣು ಕಿತ್ತಿದ್ದಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ – ಇಬ್ಬರ ಬಂಧನ

Public TV
1 Min Read

ಲಕ್ನೋ: ತೋಟದಿಂದ ಸೀಬೆ ಹಣ್ಣನ್ನು (Guava) ಕಿತ್ತಿದ್ದಕ್ಕೆ ದಲಿತ ವ್ಯಕ್ತಿಯನ್ನು (Dalit Man) ದೊಣ್ಣೆಯಿಂದ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢದಲ್ಲಿ (Aligarh) ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಸಹೋದರ ಸತ್ಯ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಸಹೋದರ ಹಸಿವನ್ನು ತಣಿಸಿಕೊಳ್ಳಲು ಹೊರಗಡೆ ಹೋಗಿದ್ದ. ಆತ ಇತರರ ತೋಟದಿಂದ ಒಂದು ಸೀಬೆ ಹಣ್ಣನ್ನು ಕಿತ್ತು ತಿಂದಿದ್ದಕ್ಕೆ ಹೊಡೆದು ಸಾಯಿಸಿದ್ದಾರೆ. ಈ ವಿಚಾರವನ್ನು ಒಬ್ಬ ಹುಡುಗ ಬಂದು ಹೇಳಿದಾಗಲೇ ನಮಗೆ ವಿಷಯ ತಿಳಿಯಿತು ಎಂದಿದ್ದಾರೆ. ಇದನ್ನೂ ಓದಿ: ತಾಯಿಯನ್ನು ನಿಂದಿಸಿದ್ದಕ್ಕೆ ಜೈಲಿನಿಂದ ಬಂದ ಸ್ನೇಹಿತರಿಂದ್ಲೇ ಯುವಕ ಕೊಲೆಯಾದ

crime

ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಓಂ ಪ್ರಕಾಶ್‌ನನ್ನು ಮೊದಲಿಗೆ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ

ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಲ್ ಅಧಿಕಾರಿ ಅಭಯ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯ 3(2)(ವಿ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *