ಮದ್ಯದ ಅಮಲಿನಲ್ಲಿ ಸಹೋದ್ಯೋಗಿ ತಲೆಗೆ ಕಲ್ಲಿನಿಂದ ಹೊಡೆದು ಕೊಂದ

Public TV
1 Min Read

ಮುಂಬೈ: ಮದ್ಯದ ಅಮಲಿನಲ್ಲಿ 22 ವರ್ಷದ ವ್ಯಕ್ತಿಯೋರ್ವ ತನ್ನ ಸಹೋದ್ಯೋಗಿಗೆ ಕಲ್ಲಿನಿಂದ ಹೊಡೆದು ಕೊಂದಿರುವ ಘಟನೆ ಮುಂಬೈನ ಪಶ್ಚಿಮ ಉಪನಗರ ಅಂಧೇರಿಯಲ್ಲಿ ನಡೆದಿದೆ.

ಆರೋಪಿಯನ್ನು ಸುಶಾಂತ್ ಘೋಟ್ಕರ್ ಎಂದು ಗುರುತಿಸಲಾಗಿದ್ದು, ಅಂಧೇರಿಯ ಮರೋಲ್ ಪ್ರದೇಶದಲ್ಲಿ ತನ್ನ ಸಹೋದ್ಯೋಗಿ ರಾಹುಲ್ ಗಾಯಕ್‍ವಾಡ್‍ನನ್ನು ಕೊಂದಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

ಕಳೆದ ವಾರ ಇಬ್ಬರು ಮದ್ಯ ಸೇವಿಸಿ ಯಾವುದೋ ವಿಷಯಕ್ಕೆ ಜಗಳವಾಡಿದ ವೇಳೆ ಈ ಘಟನೆ ನಡೆದಿದ್ದು, ಸುಶಾಂತ್ ಘೋಟ್ಕರ್ ಸಹೋದ್ಯೋಗಿ ರಾಹುಲ್ ಗಾಯಕ್‍ವಾಡ್ ಮುಖದ ಮೇಲೆ ಅನೇಕ ಬಾರಿ ಕಲ್ಲಿನಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಶವ ಪತ್ತೆಯಾಗಿದ್ದು, ಗಾಯಕ್‍ವಾಡ್‍ನನ್ನು ಹತ್ಯೆಗೈದಿರುವುದಾಗಿ ಮತ್ತೊಬ್ಬ ಸಹೋದ್ಯೋಗಿಗೆ ಸುಶಾಂತ್  ತಿಳಿಸಿದ್ದರಿಂದ ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಚೀನೀ ಟೆಲಿಕಾಂ ಕಂಪನಿ ಹುವಾವೇ ಮೇಲೆ ಐಟಿ ರೇಡ್

Share This Article
Leave a Comment

Leave a Reply

Your email address will not be published. Required fields are marked *