ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಅಳಿಯ, ಮಗಳನ್ನ ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ

Public TV
1 Min Read

ಚೆನ್ನೈ: ತನ್ನ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದಕ್ಕೆ ಅಳಿಯ ಮತ್ತು ಮಗಳನ್ನು ಟುಟಿಕೋರಿನ್ ಜಿಲ್ಲೆಯ ತಂದೆಯೊಬ್ಬ ಕುಡುಗೋಲಿನಲ್ಲಿ ಕೊಚ್ಚಿ ಕೊಂದಿದ್ದಾನೆ.

ಟುಟಿಕೋರಿನ್ ಜಿಲ್ಲೆಯ ಕೋವಿಲ್‍ಪಟ್ಟಿ ನಗರದ ಸಮೀಪದ ವೀರಪಟ್ಟಿ ಗ್ರಾಮದ ನಿವಾಸಿ ಮುತ್ತುಕುಟ್ಟಿ(50) ಆರೋಪಿಯಾಗಿದ್ದಾನೆ. ಆತನ ಪುತ್ರಿ ರೇಷ್ಮಾ(20) ಕೋವಿಲ್‍ಪಟ್ಟಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಇದನ್ನೂ ಓದಿ: ಎಸಿ ರೈಲಿನ ಒಳಗಡೆಯೇ ಛತ್ರಿ ಹಿಡಿದು ಕುಳಿತ ಪ್ರಯಾಣಿಕರು 

ಅದೇ ಪ್ರದೇಶದ ದಿನಗೂಲಿ ಕಾರ್ಮಿಕ ಮಾಣಿಕರಾಜ್(26)ನನ್ನು ರೇಷ್ಮಾ ಪ್ರೀತಿಸುತ್ತಿದ್ದಳು. ಮುತ್ತುಕುಟ್ಟಿಗೆ ಇಬ್ಬರು ತಮ್ಮ ಪ್ರೀತಿಯ ವಿಚಾರವನ್ನು ಹೇಳಿಕೊಂಡಿದ್ದಾರೆ. ಆದರೆ ಮುತ್ತುಕುಟ್ಟಿ ಒಪ್ಪಿಕೊಂಡಿಲ್ಲ. ಪರಿಣಾಮ ಇಬ್ಬರು ಓಡಿ ಹೋಗಿ ಮದುವೆ ಮಾಡಿಕೊಂಡು ಮತ್ತೆ ಹಳ್ಳಿಗೆ ವಾಪಸ್ ಬಂದಿದ್ದರು.

ಮುತ್ತುಕುಟ್ಟಿ ಅವರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದನು. ಆದರೆ ಗ್ರಾಮ ಪಂಚಾಯತಿ ಮೂಲಕ ಇಬ್ಬರಿಗೂ ಗ್ರಾಮದಲ್ಲಿ ವಾಸ ಮಾಡಲು ಅವಕಾಶ ಮಾಡಿಕೊಡಲಾಯಿತು. ಈ ಕಾರಣ ಮಗಳ ಮೇಲೆ ಮುತ್ತುಕುಟ್ಟಿಗೆ ಸಿಟ್ಟು ಹೆಚ್ಚುವಂತೆ ಮಾಡಿತು. ಸೋಮವಾರ ಸಂಜೆ ಮನೆಯಲ್ಲಿ ರೇಷ್ಮಾ ಮತ್ತು ಆಕೆಯ ಪತಿ ಮಾಣಿಕರಾಜ್ ಇಬ್ಬರೇ ಇದ್ದಾಗ ಮುತ್ತುಕುಟ್ಟಿ ಅಲ್ಲಿಗೆ ಹೋಗಿ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ 

MARRIAGE

ಘಟನೆಯ ಬಗ್ಗೆ ಮಾಹಿತಿಯನ್ನು ಆಧರಿಸಿ, ಎಟ್ಟಾಯಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಸುತ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಟುಟಿಕೋರಿನ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಪ್ರಸುತ ಮುತ್ತುಕುಟ್ಟಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *