ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ

Public TV
1 Min Read

ವಿಜಯನಗರ: ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲಿ ಗೃಹಿಣಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ವಿಜಯನಗರ (Vijaya Nagar) ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಪ್ರತಿಭಾ ನಾಗರಾಜ್ (25) ಕೊಲೆಯಾದ ಮಹಿಳೆ ಹಾಗೂ ದುಗ್ಗಾವತಿ ಪಕ್ಕದ ಚಿರಸ್ತಹಳ್ಳಿಯ ನಿವಾಸಿ ಮೂಕಪ್ಪನವರ ಹನುಮಂತ (27) ಕೊಲೆ ಮಾಡಿದ ಆರೋಪಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆಗೆಂದು ಪ್ರತಿಭಾ ಚಿಕ್ಕಮ್ಮನ ಮನೆಗೆ ಬಂದಿದ್ದಳು.

ಈ ವೇಳೆ ಹನುಮಂತು ಆಕೆಯನ್ನು ನೋಡಿದ್ದಾನೆ. ತಾನು ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಚೆನ್ನಾಗಿರುವುದನ್ನು ಸಹಿಸಲಾಗದೇ ಹುಚ್ಚನಂತಾಗಿದ್ದಾನೆ. ಇದರಿಂದಾಗಿ ಸಿಟ್ಟಿನಲ್ಲಿ ಹೋಗಿ ಹನುಮಂತ, ಪ್ರತಿಭಾಳ ಬಹುತೇಕ ಭಾಗಗಳಿಗೆ ಮನಬಂದಂತೆ ಚಾಕು ಇರಿದಿದ್ದಾನೆ. ಇದನ್ನೂ ಓದಿ: ಸೊಳ್ಳೆ ಔಷಧಿ ಸಿಂಪಡಿಸಿದವರಿಗೆ ಬಿಲ್ ಬಾಕಿ ಆರೋಪ – ಬಿಬಿಎಂಪಿ ವಿರುದ್ಧ ಪೊಲೀಸ್ ಠಾಣೆಗೆ ದೂರು

ಘಟನೆ ಹಿನ್ನೆಲೆಯಲ್ಲಿ ತೀವ್ರಗಾಯಗೊಂಡಿದ್ದ ಪ್ರತಿಭಾಳನ್ನು ಹರಿಹರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ರಸ್ತ ಸ್ರಾವದಿಂದ ಮಾರ್ಗಮಧ್ಯಯೇ ಸಾವನ್ನಪ್ಪಿದ್ದಾರೆ. ಪ್ರತಿಭಾ ರಾಣೆಬೆನ್ನೂರಿನ‌ ನಾಗರಾಜ್ ಎಂಬುವವರ ಜೊತೆ ವಿವಾಹವಾಗಿದ್ದು, ಓರ್ವ ಗಂಡು ಮಗು ಸಹ‌ ಇದೆ. ಘಟನೆಗೆ ಸಂಬಂಧಿಸಿದಂತೆ ಹರಪನಹಳ್ಳಿ ‌ತಾಲೂಕಿನ ಹಲವಾಗಲು ‌ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಪರಾರಿಯಾದ ಹನುಮಂತುವನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆ ಆಗ್ತೀನಿ ಅಂತಾ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟ

Share This Article
Leave a Comment

Leave a Reply

Your email address will not be published. Required fields are marked *