ಚೆನ್ನೈ: ಕ್ಷುಲಕ ಕಾರಣಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ತಾಯಿಯ ರುಂಡವನ್ನು ಕತ್ತರಿಸಿದ ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಪುದುಕೋಟೈ ಜಿಲ್ಲೆಯಲ್ಲಿ ನಡೆದಿದೆ.
ರಾಣಿ ಕೊಲೆಯಾದ ಮಹಿಳೆಯಾಗಿದ್ದು, ಅನಂದ್ (30) ಕೊಲೆ ಮಾಡಿದ ಆರೋಪಿ. ಈಗಾಗಲೇ ಗಂಡನನ್ನು ಕಳೆದುಕೊಂಡಿರುವ ರಾಣಿ ಮಗ ಅನಂದನೊಂದಿಗೆ ವಾಸವಿದ್ದರು. ಆದರೆ ಕಳೆದ ಹಲವು ದಿನಗಳಿಂದ ತಾಯಿ ಮಗನ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಕ್ಷುಲಕ ಕಾರಣಕ್ಕೆ ತಾಯಿ ಮಗನ ನಡುವೆ ಜಗಳ ಆರಂಭವಾಗಿದ್ದು, ಈ ವೇಳೆ ಅನಂದ್ ಹರಿತವಾದ ಆಯುಧದಿಂದ ತಾಯಿಯ ರುಂಡವನ್ನು ಕತ್ತರಿಸಿ, ರುಂಡ ಸಮೇತ ಸ್ಥಳೀಯ ಕರಾಂಬಕುಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಲೆಯಾದ ಮಹಿಳೆ 10 ವರ್ಷಗಳ ಹಿಂದೆ ತನ್ನ ಗಂಡನ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಸದ್ಯ ಅನಂದ್ ನನ್ನು ಬಂಧಿಸಿರುವ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.