ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

Public TV
2 Min Read

ಕರ್ನೂಲ್: ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನ ಆಕೆಯ ಪ್ರಿಯತಮ ಕತ್ತು ಹಿಸುಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಈ ಘಟನೆ ಡೋನ್ ಮಂಡಲ್ ನ ಎರಗುಂಟ್ಲಾದಲ್ಲಿ ನವೆಂಬರ್ 20ರಂದು ನಡೆದಿದೆ. ಮೃತ ಗರ್ಭಿಣಿಯನ್ನು ರಮಿಜಬಿ ಎಂದು ಗುರುತಿಸಲಾಗಿದ್ದು, ಈಕೆಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?: ಮೃತ ರಮಿಜಬಿಗೆ ಈ ಹಿಂದೆ ಮದುವೆಯಾಗಿದ್ದು, ತನ್ನ ಗಂಡನಿಂದ ವಿಚ್ಛೇದನ ಪಡೆದು, ಮಗ ಅಖಿಲ್ ಕುಮಾರ್ ಜೊತೆ ತಂದೆ-ತಾಯಿಯೊಂದಿಗೆ ವಾಸವಾಗಿದ್ದರು. ತವರು ಮನೆಯಲ್ಲಿ ವಾಸವಾಗಿದ್ದ ರಮಿಜಬಿಗೆ ಸ್ಥಳೀಯ ಬಟ್ಟೆ ಅಂಗಡಿಯಲ್ಲಿ ಕೆಲಸ ದೊರೆತಿತ್ತು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಂಗಡಿ ಮಾಲೀಕನ ಮಗ ಶೇಖ್ ರಶೀದ್(22) ಜೊತೆ ಪ್ರೇಮಾಂಕುರವಾಗಿತ್ತು.

ಕೆಲ ದಿನಗಳ ಬಳಿಕ ಅಂಗಡಿ ಮಾಲೀಕನ ಮಗ ಹಾಗೂ ನಾನು ಪ್ರೀತಿಸಿದ್ದು, ಆದ್ರೆ ಇದೀಗ ಆತ ತನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಹಿರಿಯರು ಮಧ್ಯಪ್ರವೇಶಿಸಿ ಪೊಲೀಸ್ ಕೇಸ್ ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿದ್ರು.

ಹಿರಿಯರ ಜೊತೆ ಮಾತುಕತೆ ನಡೆಸಿದ ಬಳಿಕ ರಶೀದ್ ಆಕೆಯ ಜೊತೆ ಸಂಬಂಧ ಮುಂದುವರೆಸಿದ್ದ. ಪರಿಣಾಮ ರಮಿಜಬಿ ಗರ್ಭಿಣಿಯಾದ್ರು. ತಾನು ಗರ್ಭಿಣಿ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಮಹಿಳೆ ಮತ್ತೆ ರಶೀದ್ ಜೊತೆ ಮದುವೆಯ ಪ್ರಸ್ತಾಪ ಮಾಡಿದ್ದರು. ಇದನ್ನೇ ಉಪಾಯವಾಗಿ ಬಳಸಿಕೊಂಡ ರಶೀದ್, ನಾವಿಬ್ಬರು ಖಂಡಿತವಾಗಿ ಚೆನ್ನಾಗಿ ಜೀವನ ನಡೆಸೋಣ. ಹೊಸ ಜೀವನ ಆರಂಭಿಸೋಣ ಅಂತೆಲ್ಲಾ ಪೀಠಿಕೆ ಹಾಕಿ ಕಳೆದ ತಿಂಗಳ 20ರಂದು ಆಕೆಯನ್ನು ಎರಗುಂಟ್ಲಾದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಅಲ್ಲೇ ಹೂತು ಹಾಕಿದ್ದಾನೆ.

ಇತ್ತ ಮಗಳು ಕಾಣದಿರುವುದರಿಂದ ಆತಂಕಗೊಂಡ ತಾಯಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿ, ರಶೀದ್‍ನನ್ನು ಕರೆಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿ ತಪ್ಪೊಪ್ಪಿಕೊಂಡ ಒಂದು ವಾರದ ಹಿಂದೆ ಕೊಲೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಹೊರತೆಗೆದು ಅಲ್ಲೇ ಶವಪರೀಕ್ಷೆ ಮಾಡಿಸಿದ್ದಾರೆ. ಬಳಿಕ ಶವವನ್ನು ಅಂತ್ಯಸಂಸ್ಕಾರಕ್ಕಾಗಿ ಮಹಿಳೆ ಹೆತ್ತವರಾದ ಲಕ್ಷ್ಮೀ ದೇವಿ ಹಾಗೂ ಮಲ್ಲೇಶ್ ದಂಪತಿಗೆ ಹಸ್ತಾಂತರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *