ಜೋರಾಗಿ ಹಾಡು ಹಾಕಿದ್ದಕ್ಕೆ ನೆರೆಮನೆಯವನನ್ನೇ ಕೊಂದ!

Public TV
1 Min Read

ಮುಂಬೈ: ಜೋರಾಗಿ ಹಾಡು ಹಾಕಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುರೇಂದ್ರ ಕುಮಾರ್ ಗುನ್ನಾರ್ (40). ನೆರೆಯ ಸೈಫ್ ಅಲಿ ಚಂದ್ ಅಲಿ ಶೇಖ್ ಎಂಬಾತ ಆರೋಪಿ. ಮುಂಬೈನ ಮಲ್ವಾನಿಯ ಅಂಬುಜ್‍ವಾಡಿ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ. ಇದನ್ನೂ ಓದಿ: ಮೊದಲನೇ ಬಾರಿಗೆ ನನ್ನ ಅಣ್ಣನಿಗೆ ವೋಟು ಹಾಕುತ್ತಿರೊದ್ರಿಂದ ಒಳ್ಳೆಯ ನಂಬರ್‌ನಲ್ಲಿ ವೋಟು ಹಾಕ್ದೆ ಅಷ್ಟೇ: ಪ್ರಜ್ವಲ್ ರೇವಣ್ಣ

POLICE JEEP

ಸುರೇಂದ್ರ ಕುಮಾರ್ ಗುನ್ನಾರ್ ತಮ್ಮ ಮನೆಯ ಹೊರಗೆ ಕುಳಿತು ರೆಕಾರ್ಡರ್‌ನಲ್ಲಿ ಜೋರಾಗಿ ಹಾಡು ಹಾಕಿಕೊಂಡು ಕೇಳುತ್ತಿದ್ದರು. ಆಗ ಈ ಶಬ್ದದಿಂದ ಕಿರಿಕಿರಿ ಅನುಭವಿಸುತ್ತಿದ್ದ ಅವರ ನೆರೆಹೊರೆಯವರಾದ ಸೈಫ್ ಅಲಿ ಚಂದ್ ಅಲಿ ಶೇಖ್ ಸೌಂಡ್ ಕಡಿಮೆ ಮಾಡಲು ಸುರೇಂದ್ರಗೆ ಸೂಚಿಸಿದ್ದಾನೆ. ಆದರೆ ಸುರೇಂದ್ರ ಮಾತ್ರ ಲೆಕ್ಕಿಸದೇ ಸುಮ್ಮನೇ ಹಾಡು ಕೇಳುತ್ತಾ ಕುಳಿತಿದ್ದಾನೆ. ಇದನ್ನೂ ಓದಿ:  ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್

ಶೇಖ್, ಸುರೇಂದ್ರನನ್ನು ಹೊಡೆದು ನೆಲಕ್ಕೆ ತಳ್ಳಿದ್ದಾನೆ. ತೀವ್ರ ಗಾಯಗೊಂಡಿದ್ದ ಸುರೇಂದ್ರ ಕುಮಾರ್ ಪ್ರಜ್ಞೆ ತಪ್ಪಿ ಬಿದ್ದರು. ಅತೀವ ರಕ್ತಸ್ರಾವ ಉಂಟಾಯಿತು. ಬಳಿಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಸಾವಿಗೀಡಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಭಾರತೀಯ ದಂಡ ಸಂಹಿತೆ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *