ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಗುಡಿಗೇ ಬೆಂಕಿಯಿಟ್ಟ!

Public TV
1 Min Read

ಮಂಗಳೂರು: ಕರಾವಳಿಯಲ್ಲಿ ದೈವ ಮತ್ತು ದೇವರನ್ನು ಸಮಾನವಾಗಿ ಪೂಜಿಸಲಾಗುತ್ತಿದೆ. ಅದರಲ್ಲೂ ತುಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊಡಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ನಡೆದಿದೆ.

ಹೌದು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ.

ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟಿದ್ದಾನೆ. ಇದನ್ನೂ ಓದಿ: ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ

ಘಟನೆ ಖಂಡಿಸಿ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್