ಮನೆ ಕಟ್ಟಲು ಬೋರ್ ವೆಲ್ ಕಟ್ ಮಾಡಿ ಮುಚ್ಚಿದ!

Public TV
1 Min Read

ಬೆಂಗಳೂರು: ಆನೇಕಲ್‍ನಲ್ಲಿ ವ್ಯಕ್ತಿಯೊಬ್ಬ ಬೋರ್ ವೆಲ್ ಕಟ್ ಮಾಡಿ ಮುಚ್ಚಿದ್ದಾನೆ. ಇಲ್ಲಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕಳಸಾಪುರ ಗ್ರಾಮದ ಗೋಮಾಳ ಜಾಗದಲ್ಲಿ ಹಲವು ಬಡವರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ.

1999ರಲ್ಲಿ ಇಲ್ಲಿನ ನೀರಿನ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಇದೇ ಸರ್ಕಾರಿ ಜಾಗದಲ್ಲಿ ಬೋರ್ ವೆಲ್ ಕೊರೆಸಿ ಅದಕ್ಕೆ ಹ್ಯಾಂಡ್ ಪಂಪ್ ಹಾಕಿಸಲಾಗಿತ್ತು. ಆದ್ರೆ ಇದೇ ಜಾಗದಲ್ಲಿ ಆನಂದ್ ಎಂಬಾತ ಮನೆ ಕಟ್ಟುತ್ತಿದ್ದು ಬೋರ್ ವೆಲ್ ಕಟ್ ಮಾಡಿ ಮುಚ್ಚಿ ಹಾಕಿದ್ದಾನೆ. ಇವನಿಗೆ ಪಂಚಾಯ್ತಿಯ ಕೆಲವರ ಬೆಂಬಲವಿದ್ದು, ನ್ಯಾಯ ಕೇಳೋಕೆ ಹೋದ್ರೆ ಜನರನ್ನು ಬೆದರಿಸ್ತಿದ್ದಾನಂತೆ.

20 ವರ್ಷಗಳಿಂದ ಈ ಜಾಗದಲ್ಲಿ ವಾಸವಿರುವ ಜನ 94 ಸಿ ಅಡಿ ಅರ್ಜಿ ಹಾಕಿಕೊಂಡಿದ್ದಾರೆ. ಆದ್ರೆ ಈತ ಯಾವುದೇ ದಾಖಲೆಯಿಲ್ಲದೆ ಮನೆ ಕಟ್ಟುತ್ತಿದ್ದು, ಜನರ ಕುಡಿಯುವ ನೀರಿಗೂ ಕಂಟಕವಾಗಿದ್ದಾನೆ. ದೂರು ನೀಡಿದ ಬಳಿಕ ಸ್ಥಳಕ್ಕೆ ಬಂದ ಪಿಡಿಓ ಗಂಗಾಧರ್ ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *