ನೆರೆಮನೆ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Public TV
1 Min Read

ಶಿವಮೊಗ್ಗ: ನೆರೆಮನೆಯವನು ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ಕುಂಟಿಗೆಯ ಪಟೇಲ್ ಈಶ್ವರಪ್ಪ ಗೌಡ ಪುತ್ರಿ ವಿದ್ಯಾಶ್ರೀ(21) ಮೃತ ಯುವತಿ. ವಿದ್ಯಾಶ್ರೀ ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ನೆರೆ ಮನೆಯ ಯುವಕ ಶಶಾಂಕ್, ವಿದ್ಯಾಶ್ರೀ ಪ್ರತಿ ನಿತ್ಯ ಕಾಲೇಜಿಗೆ ತೆರಳುವ ವೇಳೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ

ವಿದ್ಯಾಶ್ರೀ ಈ ಕಿರುಕುಳಕ್ಕೆ ಬೇಸತ್ತು ಏಪ್ರಿಲ್ 19 ರಂದು ಕ್ರಿಮಿನಾಶಕ ಸೇವಿಸಿದ್ದಳು. ಈ ಹಿನ್ನೆಲೆ ಪೋಷಕರು ಆಕೆಯನ್ನು ಮಣಿಪಾಲಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.

ಈ ಸಾವಿಗೆ ಶಶಾಂಕ್ ಕಾರಣ ಆತನನ್ನು ಬಂಧಿಸಿ ಎಂದು ವಿದ್ಯಾಶ್ರೀ ಸಹೋದರ ರಕ್ಷಿತ್ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಪ್ರಸ್ತುತ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

Share This Article
Leave a Comment

Leave a Reply

Your email address will not be published. Required fields are marked *