ಟೀ ಮಾರಿದ್ದ ಮೋದಿ ಪ್ರಧಾನಿಯಾದ್ರು, ನಾನು ಟೀ ಗ್ಲಾಸು ತೊಳೆದ್ರೆ ತಪ್ಪೇನು- ನಾರಾಯಣ ಗೌಡ

Public TV
2 Min Read

ಮಂಡ್ಯ: ಕೆಆರ್ ಪೇಟೆ ಕದನ ಕಣದಲ್ಲಿ ಮುಂಬೈ ವಿಚಾರ ಸಖತ್ ಸದ್ದು ಮಾಡುತ್ತಿದೆ. ನಾನು ಕೂಲಿ ಮಾಡಿದ್ದೇನೆ. ಹೊಟೇಲ್‍ನಲ್ಲಿಯೂ ಕೆಲಸ ಮಾಡಿದ್ದೇನೆ. ಈಗಲೂ ನಾನು ಲೋಟ ತೊಳೆಯುತ್ತೇನೆ. ನನ್ನ ಹೊಟೇಲಿನಲ್ಲಿ ತಟ್ಟೆ, ಗ್ಲಾಸು ತೊಳೆದ್ರೆ ಏನು ತಪ್ಪು ಅಂತ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಪ್ರಶ್ನಿಸಿದ್ದಾರೆ.

ಕೆಆರ್ ಪೇಟೆಯ ವಡ್ಡರಹಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಟೀ ಮಾರುತ್ತಿದ್ದರು. ಈಗ ಅವರು ನಮ್ಮ ದೇಶದ ಪ್ರಧಾನಿ ಆಗಿದ್ದಾರೆ. ತಟ್ಟೆ ಗ್ಲಾಸು ತೊಳೆದ್ರೆ ಏನು ತಪ್ಪು ಅನ್ನೋ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷ ಗುದ್ದು ನೀಡಿದ್ದಾರೆ. ಜೊತೆಗೆ ಇದೇ ವಿಚಾರವನ್ನೇ ಪ್ರಚಾರದಲ್ಲಿ ಪ್ರಸ್ತಾಪಿಸಿ ಅನುಕಂಪ ಗಿಟ್ಟಿಸಲು ನಾರಾಯಣಗೌಡ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ದೇವೇಗೌಡರ ಬೀಗರು ಕೆಆರ್ ಪೇಟೆಯನ್ನು ಕಮಾಟಿಪುರ ಮಾಡುವುದಾಗಿ ಹೇಳುತ್ತಾರೆ. ನನ್ನ ಮನಸ್ಸಿನಲ್ಲಿ ಇದುವರೆಗೂ ಅಂತಹ ಭಾವನೆ ಬಂದಿಲ್ಲ. ಡಿ.ಸಿ.ತಮ್ಮಣ್ಣ ಕಮಾಟಿಪುರನಾ ಅವರ ತಾಲೂಕಿನಲ್ಲಿ ಮಾಡಿಕೊಳ್ಳಲಿ. ನನ್ನ ಶರೀರದಲ್ಲಿ ಉಸಿರಿರುವವರೆಗೆ ನನ್ನ ತಾಲೂಕಿನಲ್ಲಿ ಹೀಗೆ ಮಾಡೋಕೆ ಬಿಡಲ್ಲ. ರಾಜ್ಯದಲ್ಲೂ ಹೀಗೆ ಮಾಡೋಕೆ ಬಿಡಲ್ಲ. ವೀರಭದ್ರಸ್ವಾಮಿ ದೇವಸ್ಥಾನದ ಮುಂದೆ ಹೇಳುತ್ತಿದ್ದೀನಿ ಎಂದು ಪ್ರಮಾಣ ಮಾಡಿದರು. ಇದನ್ನೂ ಓದಿ: ನಾನೇನು ತಪ್ಪು ಮಾಡಿದೆ, ನನ್ನನ್ನು ಯಾಕೆ ಕೈ ಬಿಟ್ಟಿರಿ – ಮಂಡ್ಯದಲ್ಲಿ ಎಚ್‍ಡಿಕೆ ಮತ್ತೆ ಕಣ್ಣೀರು

ನಾನು ಇದುವರೆಗೂ ಸರಿಯಾಗಿ ಕಮಾಟಿಪುರ ನೋಡೇ ಇಲ್ಲ. ಕಾರಲ್ಲಿ ಹೋಗುವಾಗ ನಾನು ದೂರದಿಂದ ನೋಡಿದ್ದೇನೆ ಅಷ್ಟೇ. ಕಮಾಟಿಪುರನಾ ಹತ್ತಿರದಿಂದ ತಮ್ಮಣ್ಣ ಅವರು ನೋಡಿಕೊಂಡು ಬಂದಿದ್ದಾರೆ. ಅದಕ್ಕೆ ಬೇಕಿದ್ರೆ ಅವರ ತಾಲೂಕಿನಲ್ಲಿ ಮಾಡಿಕೊಳ್ಳಲಿ. ನಾನು ಬಿಜೆಪಿ ಸೇರಿದ್ದೇನೆ ಎಂದು ಜೆಡಿಎಸ್ ಕುಟುಂಬ ಮನೆ ಮನೆಗೆ ಪ್ರಚಾರಕ್ಕೆ ಬರುತ್ತಾ ಇದೆ. ಅಂದು ನಾನು ಎಲೆಕ್ಷನ್‍ನಲ್ಲಿ ನಿಂತಾಗ ಯಾಕೆ ಅವರು ಬರಲಿಲ್ಲ. ನನ್ನ ಸೋಲಿಸಲು ಗ್ರೂಪ್ ಮಾಡಿಕೊಂಡು ತಿರುಗಿದರು ಎಂದು ವಾಗ್ದಾಳಿ ನಡೆಸಿದರು.

ನನ್ನ ಬಾಂಬೆ ಕಳ್ಳ ಅಂತಾರೇ. ಹಾಗಿದ್ರೆ ನನ್ನ ಮನೆಗೆ 15 ವರ್ಷದಿಂದ ಯಾಕೆ ಬರ್ತಾ ಇದ್ರಿ. ಇಡೀ ಕುಟುಂಬ ಯಾಕೆ ನನ್ನ ಹತ್ತಿರ ಬರ್ತಾ ಇದ್ರಿ. ಇಡೀ ಕುಟುಂಬ ಬಾಂಬೆಗೆ ಬಂದ್ರೆ ನನಗೆ ಹೇಳ್ತಾ ಇದ್ರಿ. ಆಗ ನಾನು ಕಳ್ಳ ಆಗಿರಲಿಲ್ವಾ. ನಾನು ಬಿಜೆಪಿಗೆ ಸೇರಿದ ಮೇಲೆ ಕಳ್ಳನಾ. ಬಿಜೆಪಿ ಪಕ್ಷ ಕಳ್ಳತನದ ಪಕ್ಷ ಅಲ್ಲ. ನಾನು ಚೆಕ್ ಮಾಡಿದ್ದೇನೆ. ಮಹಾರಾಷ್ಟ್ರ, ದೆಹಲಿ ಎಲ್ಲಾ ಕಡೆ ಚೆಕ್ ಮಾಡಿದ್ದೇನೆ. ಬಿಜೆಪಿ ಪ್ರಮಾಣಿಕರ ಪಕ್ಷ ಎಂದರು.

 

Share This Article
Leave a Comment

Leave a Reply

Your email address will not be published. Required fields are marked *