ವೃದ್ಧೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಎಚ್‍ಡಿಡಿ

Public TV
1 Min Read

ಮಂಡ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವೃದ್ಧೆಯೊಬ್ಬರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದಲ್ಲಿ ಸಂತಾನ ಲಕ್ಷ್ಮಿ ದೇವಿ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೇವೇಗೌಡರು, ಅದೇ ಗ್ರಾಮದ 92 ವರ್ಷದ ವೃದ್ಧೆ ಕೆಂಪಮ್ಮ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಸಂತಾನ ಲಕ್ಷ್ಮಿ ದೇವಿ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮಕ್ಕೆ ದೇವೇಗೌಡರು ಬಂದಿದ್ದಾರೆ ಎಂದು ತಿಳಿದು, ಕೆಂಪಮ್ಮ ಅವರನ್ನು ನೋಡಲು ಬಂದಿದ್ದರು. ಈ ವೇಳೆ ವೃದ್ಧೆಯ ಯೋಗ ಕ್ಷೇಮ ವಿಚಾರಿಸಿದ ದೇವೇಗೌಡರು ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ವೃದ್ಧೆಯನ್ನು ವೇದಿಕೆಯಲ್ಲಿ ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *