ರೈತರ ಹೊಟ್ಟೆ ಉರಿಯುತ್ತಿದೆ ಅಂತ ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ

Public TV
1 Min Read

ಮಂಡ್ಯ: ಅಕ್ಟೋಬರ್ 15ರ ವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನ (Cauvery Water) ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇದರಿಂದ ಮಂಡ್ಯದ ರೈತರ (Mandya Farmers) ಆಕ್ರೋಶ ಕಟ್ಟೆಯೊಡೆದಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಖಂಡಿಸಿ ರಸ್ತೆಯಲ್ಲೇ ವಿನೂತನ ಪ್ರತಿಭಟನೆ ನಡೆಸಿದ ರೈತರು ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರು

ಈ ಕುರಿತು ಮಾತನಾಡಿದ ರೈತಮುಖಂಡರು, ಇಂದು ಮಂಡ್ಯದ ರೈತರಿಗೆ ಸಿಹಿ ಸುದ್ದಿ ಸಿಗುತ್ತೆ ಅಂತಾ ಭಾವಿಸಿದ್ದೆವು. ಆದ್ರೆ ಕಹಿ ಮತ್ತು ಖಾರವಾದ ಸುದ್ದಿ ಬಂದಿದೆ. ಈಗ ನಿಜವಾಗಿಯೂ ಹೊಟ್ಟೆ ಉರಿಯುತ್ತಿದೆ. ಇನ್ನೂ ಈ ರಾಜ್ಯದ ರೈತರಿಗೆ ಎಷ್ಟು ಹೊಟ್ಟೆ ಉರಿಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

ಕಾವೇರಿ ಕೊಳ್ಳ ಪ್ರದೇಶದ ಜನರಿಗೆ ಕಾವೇರಿ ಪ್ರಾಧಿಕಾರ ನೀಡಿರುವ ಆದೇಶ ಹೊಟ್ಟೆ ಉರಿಯುವಂತೆ ಮಾಡಿದೆ. ಆದ್ದರಿಂದ ಈ ಭ್ರಷ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಾರವಾದ ಸಂದೇಶ ನೀಡಲು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದೇವೆ. ಇನ್ನಾದರೂ ಎಚ್ಚೆತ್ತುಕೊಂಡು ಕಾವೇರಿಯನ್ನ ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್