ಕರ್ನಾಟಕದಲ್ಲಿ ಕಾಣಿಸಿಕೊಂಡ ಹುಚ್ಚ ವೆಂಕಟ್

Public TV
1 Min Read

ಮಂಡ್ಯ: ಕೆಲವು ದಿನಗಳ ಹಿಂದೆಯಷ್ಟೇ ಚೆನ್ನೈನ ಬೀದಿಗಳಲ್ಲಿ ಚಪ್ಪಲಿ ಇಲ್ಲದೆ ತಿರುಗಾಡುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಈಗ ಮಂಡ್ಯ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಪಾಂಡವಪುರದ ಮಂಡ್ಯ ಸರ್ಕಲ್‍ನಲ್ಲಿ ಹುಚ್ಚ ವೆಂಕಟ್ ಸಹಜ ಸ್ಥಿತಿಯಲ್ಲೇ ಕಾಣಿಸಿಕೊಂಡಿದ್ದಾರೆ. ನೀಲಿ ಶರ್ಟ್, ಕಪ್ಪು ನೀಲಿ ಬಣ್ಣ ಪ್ಯಾಂಟ್ ಹಾಗೂ ಶೂ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನು ನೋಡಿದ ಕೆಲ ಯುವಕರು ತಮ್ಮ ಮೊಬೈಲ್‍ನಲ್ಲಿ ಹುಚ್ಚ ವೆಂಕಟ್ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದಿದ್ದಾರೆ.

ಹುಚ್ಚ ವೆಂಕಟ್ ಕಾರಿನಲ್ಲಿ ಬಂದಿದ್ದರು. ಆದರೆ ಸ್ವಲ್ಪ ಸಮಯದ ಬಳಿಕ ಕಾರಿನಿಂದ ಇಳಿದು ರಸ್ತೆಯಲ್ಲಿ ನಡೆದುಕೊಂಡು ಹೋದರ. ಈ ಮಧ್ಯೆ ಮಾತನಾಡಿಸಲು ಮುಂದಾದ ಯುವಕನೊಬ್ಬನಿಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಫೈರಿಂಗ್ ಸ್ಟಾರ್ ಮತ್ತು ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗಿರುವ ನಟ ಹುಚ್ಚ ವೆಂಕಟ್ ಚೆನ್ನೈನ ಬೀದಿಯಲ್ಲಿ ತಿರುಗಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ತಮ್ಮ ಫೇಸ್‍ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ನಟ ಭುವನ್ ಪೊನ್ನಣ್ಣ ಬೆಂಗಳೂರಿಗೆ ಕರೆ ತರಲು ಪ್ರಯತ್ನಿಸಿ ಎಂದು ಮನವಿ ಮಾಡಿಕೊಂಡಿದ್ದರು. ವಿಡಿಯೋ ನೋಡಿದ್ದ ಭುವನ್ ಸ್ನೇಹಿತರೊಬ್ಬರು ಹುಚ್ಚ ವೆಂಕಟ್‍ನನ್ನು ಬೆಂಗಳೂರಿಗೆ ಕರೆತರಲು ಪ್ರಯತ್ನಿಸಿದ್ದಾರೆ.

ಚೆನ್ನೈನ ಬೀದಿಯಲ್ಲಿ ಚಪ್ಪಲಿ ಧರಿಸದೇ, ಕೊಳಕು ಬಟ್ಟೆ ಹಾಕಿಕೊಂಡು ತಿರುಗಾಡುತ್ತಿದ್ದ ಹುಚ್ಚ ವೆಂಕಟ್‍ನನ್ನ ಭುವನ್ ಸ್ನೇಹಿತ ಪತ್ತೆ ಹೆಚ್ಚಿದ್ದಾರೆ. ಹುಚ್ಚ ವೆಂಕಟ್ ನನ್ನು ಕೂರಿಸಿಕೊಂಡು ಬೆಂಗಳೂರಿಗೆ ಹೋಗುವ ಬಗ್ಗೆ ಮಾತನಾಡಿದ್ದರು. ಆದರೆ ಸಹಾಯ ಮಾಡಲು ಹೋದ ಭುವನ್ ಸ್ನೇಹಿತನಿಗೆ ಹುಚ್ಚ ವೆಂಕಟ್ ಕೌಂಟರ್ ನೀಡಿದ್ದರು. ವೆಂಕಟ್ ಜೊತೆ ಮಾತನಾಡಿರುವ ಸಂಭಾಷಣೆಯನ್ನು ಭುವನ್ ಗೆಳೆಯ ವಿಡಿಯೋ ಮಾಡಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *