ತಮ್ಮ ಪಕ್ಷದ ಎಂಎಲ್‍ಸಿಯನ್ನು ಸಮರ್ಥಿಸಿಕೊಂಡ ಮಾಜಿ ಎಂಪಿ ಶಿವರಾಮೇಗೌಡ

Public TV
2 Min Read

– ವಸತಿ ಪ್ರದೇಶದಲ್ಲಿ ಟೆಸ್ಟ್ ಮಾಡುವುದು ತಪ್ಪು

ಮಂಡ್ಯ: ವಸತಿ ಪ್ರದೇಶದಲ್ಲಿ ಕೊರೊನಾ ಟೆಸ್ಟ್ ಮಾಡುವುದು ತಪ್ಪು ಎಂದು ಹೇಳುವ ಮೂಲಕ ಮಾಜಿ ಸಂಸದ ಶಿವರಾಮೇಗೌಡ ತಮ್ಮ ಪಕ್ಷದ ಎಂಎಲ್‍ಸಿ ಶಿವರಾಮೇಗೌಡರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಎಂಎಲ್‍ಸಿ ಶ್ರೀಕಂಠೇಗೌಡ ಮತ್ತು ಅವರ ಪುತ್ರ ಪತ್ರಕರ್ತರ ಮೇಲೆ ಮಾಡಿದ ಹಲ್ಲೆಯ ವಿಚಾರವಾಗಿ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಶಿವರಾಮೇಗೌಡ, ಮಾಧ್ಯಮ ಮಿತ್ರರ ಮೇಲೆ ಹಲ್ಲೆ ಮಾಡಿದ್ದು ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಆದರೆ ವಸತಿ ಪ್ರದೇಶದ ಮಧ್ಯದಲ್ಲಿ ಇರುವ ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಮಾಡಲು ಅಧಿಕಾರಿಗಳು ಅನುಮತಿ ನೀಡಿದ್ದು ಎಷ್ಟು ಸರಿ? ಅಂತಹ ಅಧಿಕಾರಿಗಳುನ್ನು ಅಮಾನತು ಮಾಡಬೇಕು ಎಂದರು.

ಕೊರೊನಾ ವಾರಿಯರ್ಸ್‍ಗೆ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಕೊರೊನಾ ಟೆಸ್ಟ್ ಮಾಡಬೇಡಿ ಎಂದು ಹೇಳಿಲ್ಲ. ಅವರ ಆರೋಗ್ಯ ತಪಾಸಣೆಯಾಗಬೇಕು. ಆದರೆ ಅದನ್ನು ವಸತಿ ಪ್ರದೇಶದ ಮಧ್ಯೆ ಇರುವ ಭವನದಲ್ಲಿ ಮಾಡಿದರೆ, ಜನರು ಸಾಮಾನ್ಯವಾಗಿಯೇ ಭಯಪಡುತ್ತಾರೆ. ಜೊತೆಗೆ ಶ್ರೀಕಂಠೇಗೌಡ ಅವರ ಮನೆಯೂ ಅದೇ ಪ್ರದೇಶದಲ್ಲಿ ಇರುವ ಕಾರಣ ಅವರು ಅದನ್ನು ಕೇಳಲು ಬಂದಿದ್ದಾರೆ ಅಷ್ಟೇ ಎಂದು ಶಿವರಾಮೇಗೌಡ ಹೇಳಿದ್ದಾರೆ.

ನಾನು ಜಿಲ್ಲಾಧಿಕಾರಿಗೆ ಮನವಿ ಮಾಡುತ್ತೇನೆ ಅಲ್ಲಿ ಕೊರೊನಾ ಪರೀಕ್ಷೆ ಮಾಡಲು ಅನುಮತಿ ಕೊಟ್ಟ ಅಧಿಕಾರಿಯನ್ನು ಅಮಾನತು ಮಾಡಬೇಕು. ಈ ಕೊರೊನಾ ಪರೀಕ್ಷೆಯನ್ನು ಊರಿನಿಂದ ಹೊರಗೆ ಹಲವಾರು ಕಟ್ಟಡಗಳು ಇವೆ ಅಲ್ಲಿ ಮಾಡಬೇಕು. ಅದನ್ನು ಬಿಟ್ಟು ಊರ ಒಳಗೆ ಯಾಕೆ ಮಾಡಬೇಕು. ಅಲ್ಲಿನ ಸ್ಥಳೀಯ ನಿವಾಸಿಗಳು ಹೆದರಿಕೊಂಡು ನನಗೆ 50 ಜನ ಕರೆ ಮಾಡಿದ್ದರು. ಕೆಲ ಸ್ಥಳೀಯ ಮಟ್ಟದ ಅಧಿಕಾರಿಗಳ ಮಾತನನ್ನು ಸರ್ಕಾರ ಕೇಳಬಾರದು ಎಂದು ಸಮರ್ಥನೆ ಮಾಡಿಕೊಂಡರು.

ನಡೆದಿದ್ದೇನು?
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್-19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ ಜಗಳ ಮಾಡಿದ್ದಾರೆ. ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *