ಹಾವು ಕಚ್ಚಿ ರೈತ ಮಹಿಳೆ ಸಾವು

Public TV
0 Min Read

ಮಂಡ್ಯ: ಜಮೀನಿಗೆ ನೀರು ಹಾಯಿಸುವಾಗ ಹಾವು ಕಚ್ಚಿ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.

ಮೃತ ದುರ್ದೈವಿ ಮಹಿಳೆಯನ್ನು 50 ವರ್ಷದ ಸಾವಿತ್ರಮ್ಮ ಎಂದು ಗುರುತಿಸಲಾಗಿದೆ. ಇವರು ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ನಿವಾಸಿಯಾಗಿದ್ದಾರೆ.

ಸಾವಿತ್ರಮ್ಮ ಇಂದು ಬೆಳಗ್ಗಿನ ಜಾವ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಬೆಳೆಗೆ ನೀರು ಹಾಯಿಸಲು ಗದ್ದೆಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಹಾವು ಕಚ್ಚಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *