ಇಂದು ಪುಟಾಣಿ ಸಮನ್ವಿಯ ಅಸ್ಥಿ ವಿಸರ್ಜನೆ

Public TV
1 Min Read

ಮಂಡ್ಯ: ನಾಲ್ಕು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಪುಟಾಣಿ ಸಮನ್ವಿಯ ಅಸ್ಥಿ ವಿಸರ್ಜನೆ ಕಾರ್ಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ನಡೆಯಿತು.

ಕಾವೇರಿ ನದಿಯಲ್ಲಿ ಸಮನ್ವಿ ತಂದೆ ರೂಪೇಶ್ ನಾಯ್ಡು ವಿಧಿವಿಧಾನಗಳನ್ನು ಪೂರೈಸಿದರು. ವೈದಿಕ ಭಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ನಡೆದ ಕೈಂಕರ್ಯ ನಡೆಯಿತು. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನವಾದ ಚಿನಕುರಳಿ ಸಮನ್ವಿ- ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ತಿರ ತರ್ಪಣ, ನಾರಾಯಣ ಬಲಿ, ಪಿಂಡ ಪ್ರದಾನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡಯಿತು. ಅಂತಿಮ ವಿಧಿ-ವಿಧಾನ ಕಾರ್ಯದಲ್ಲಿ ಸಮನ್ವಿ ತಾತ ನಾರಾಯಣಸ್ವಾಮಿ, ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಭಾಗಿಯಾಗಿದ್ದರು.

ಗುರುವಾರ ಕೋಣನ ಕುಂಟೆ ಬಳಿ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆಯಿತು. ಈ ಅವಘಡದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ತಾಯಿ ಅಮೃತಾ ನಾಯ್ಡು ಸಣ್ಣ-ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *