ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಜಿಲ್ಲಾಡಳಿತದಿಂದ ಸನ್ಮಾನ

Public TV
1 Min Read

ಮಂಗಳೂರು: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಹರೇಕಳ ಹಾಜಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಅಭಿನಂದಿಸಲಾಯಿತು. ನೆಹರೂ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಹಾಜಬ್ಬರನ್ನು ಸನ್ಮಾನಿಸಿ ಗೌರವಿಸಿದರು.

ಸರಳ ಸಜ್ಜನಿಕೆಯ ಹರೇಕಳ ಹಾಜಬ್ಬರು ಕಿತ್ತಳೆ ಹಣ್ಣನ್ನು ಮಾರಿ 2000ನೇ ಇಸವಿಯಲ್ಲಿ ಶಾಲೆ ಕಟ್ಟಿದ್ದು ಬಡ ಮಕ್ಕಳಿಗೆ ವಿದ್ಯಾದಾನ ಮಾಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯನ್ನು ಹಾಜಬ್ಬರು ನಡೆಸುತ್ತಿದ್ದು, ಒಟ್ಟು 170 ಮಂದಿ ಬಡ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಹಾಜಬ್ಬರು ಇಂದೂ ಕಿತ್ತಳೆ ಹಣ್ಣನ್ನು ಮಾರಿ ಹಣವನ್ನು ಶಾಲೆಯ ಅಭಿವೃದ್ಧಿಗೆ ಬಳಸುತ್ತಿದ್ದಾರೆ. ಅಕ್ಷರ ಸಂತ ಹಾಜಬ್ಬರ ಈ ನಿಸ್ವಾರ್ಥ ಸೇವೆಯನ್ನು ಗಮನಿಸಿ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹ ಅಪೂರ್ವ ಸಾಧಕನಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸನ್ಮಾನಿಸಿ ಅಭಿನಂದಿಸಿದೆ. ಇದನ್ನು ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ

Share This Article
Leave a Comment

Leave a Reply

Your email address will not be published. Required fields are marked *