ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ – ಇಬ್ಬರು ಆರೋಪಿಗಳ ಬಂಧನ

Public TV
1 Min Read

ಮಂಗಳೂರು: ಆರೋಗ್ಯ ವಿಚಾರಿಸಿದ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಮಾರಪ್ಪ ಪೂಜಾರಿ ಹಾಗೂ ಉಮೇಶ್ ಬಂಧಿತ ಆರೋಪಿಗಳು. ಆರೋಗ್ಯ ಇಲಾಖೆಯಲ್ಲಿ ಕೊರೊನಾ ವೈರಸ್ ತಪಾಸಣೆ ಸಂಬಂಧಿಸಿದ ಕರ್ತವ್ಯ ನಿರ್ತಹಿಸುತ್ತಿದ್ದ ಅಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆ ತುಳಸಿ(48) ಅವರಿ ಇಬ್ಬರು ಆರೋಪಿಗಳು ಜೀವ ಬೆದರಿಕೆ ಹಾಕಿದ್ದರು. ತನ್ನ ಕರ್ತವ್ಯದಂತೆ ವಿದೇಶದಿಂದ ಬಂದು ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟಿನಲ್ಲಿರುವ ನಿತೇಶ್ ಹಾಗೂ ಜಯಂತ್ ಎಂಬವರಿಗೆ ಕರೆ ಮಾಡಿ ತುಳಸಿ ಅವರು ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಗ್ಯಾಂಗ್ ದಾಳಿ

ಇಷ್ಟಕ್ಕೆ ಕೋಪಗೊಂಡ ನಿತೇಶ್ ಸಂಬಂಧಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ್ ಫೋನ್‍ನಲ್ಲಿಯೇ ತುಳಸಿ ಅವರಿಗೆ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *