ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರ ಬಂಧನ

Public TV
1 Min Read

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್ ಮತ್ತು ಅಶ್ರಫ್ ಬಂಧಿತರು. ಆರೋಪಿಗಳು ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ್ದರು.

ವಸಂತಿ ಎಂಬ ಆಶಾ ಕಾರ್ಯಕರ್ತೆ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ ಕಾರ್ಯಕರ್ತೆಗೆ ಬೆದರಿಕೆಯನ್ನೂ ಹಾಕಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ವಸಂತಿ ಅವರು ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸರ್ಕಾರಿ ಇಲಾಖೆಯ ನಿಯೋಜಿತ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *