ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್‌ನಿಂದ ದಾಳಿ

Public TV
1 Min Read

ಮಂಗಳೂರು: ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ತಲ್ವಾರ್‌ನಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು. ಬಂಟ್ವಾಳ ತಾಲೂಕಿನ ಮಂಚಿಯಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳು ದಾಳಿ ಮಾಡಿ, ಪರಾರಿಯಾಗಿದ್ದಾರೆ.

ಅನಾರೋಗ್ಯದಿಂದಾಗಿ ರಝಾಕ್ ಕುಕ್ಕಾಜಿ ಅವರು ಮಂಚಿ ಗ್ರಾಮದ ಆಸ್ಪತ್ರೆಗೆ ಶನಿವಾರ ಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಮೂವರಿದ್ದ ತಂಡವು ರಝಾಕ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೈಗೆ ಏಟು ಬಿದ್ದ ಕೂಡಲೇ ಓಡಿ ತಪ್ಪಿಸಿಕೊಂಡಿದ್ದರಿಂದ ರಝಾಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ದಾಳಿಯಲ್ಲಿ ರಝಾಕ್ ಕೈಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುಕ್ಕಾಜೆ ಮಸೀದಿಯಲ್ಲಿ ಆಗಿರುವ ಗಲಾಟೆ ಹಿನ್ನೆಲೆಯಲ್ಲೆ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *